Webdunia - Bharat's app for daily news and videos

Install App

ಗೋರಖ್ ಪುರದಲ್ಲಿ ಮಕ್ಕಳ ಸಾವು: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ತನಿಖಾ ತಂಡ

Webdunia
ಗುರುವಾರ, 17 ಆಗಸ್ಟ್ 2017 (11:18 IST)
ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್`ಡಿ ಮೆಡಿಕಲ್ ಕಾಲೇಜಿನಲ್ಲಿ 60 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಮಿತಿ ಸ್ಫೋಟಕ ಮಾಹಿತಿಯನ್ನ ಪತ್ತೆ ಹಚ್ಚಿದ್ದಾರೆ.
 

ಮಕ್ಕಳ ಸಾವಿನ ಹಿಂದೆ ಆಸ್ಪತ್ರೆಯ ಹಣಕಾಸು ಅವ್ಯವಹಾರದ ಕರ್ಮಕಾಂಡ ಇರುವುದು ಬೆಳಕಿಗೆ ಬಂದಿದೆ. ಆಕ್ಸಿಜನ್ ಕೊರತೆಯಿಂದಲೇ ಮಕ್ಕಳು ಮೃತಪಟ್ಟಿದ್ದು, ಆಕ್ಸಿಜನ್ ಸರಬರಾಜುದಾರರಿಗೆ ಪೇಮೆಂಟ್ ತಡವಾಗಿರುವುದು ಆಕ್ಸಿಜನ್ ಕೊರತೆಗೆ ಕಾರಣ ಎಂದು ತಿಳಿದು ಬಂದಿದೆ.

ನ್ಯೂಸ್-18 ವರದಿ ಮಾಡಿರುವ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ತನಿಖಾ ತಂಡ 8 ವೈಫಲ್ಯಗಳನ್ನ ಎತ್ತಿ ತೋರಿಸಿದೆ. ಆಕ್ಸಿಜನ್ ಸರಬರಾಜುದಾರರಿಗೆ ನೀಡಬೇಕಾದ ಪೇಮೆಂಟ್ ಆಗಸ್ಟ್ 5ರಂದೆ ಆಸ್ಪತ್ರೆ ಖಾತೆಗೆ ಕ್ರೆಡಿಟ್ ಆಗಿದೆ. ಆಸ್ಪತ್ರೆಯ ಸಿಬ್ಬಂದಿ ಹಣದ ವರ್ಗಾವಣೆಯನ್ನ ತಡೆದಿದ್ದಾರೆ. ಇದರಲ್ಲಿ 6 ಉದ್ಯೋಗಿಗಳ ಕೈವಾಡವಿದ್ದು, ಭ್ರಷ್ಟಾಚಾರದ ಸುಳಿವು ಸಿಕ್ಕಿದೆ. ಪದೇ ಪದೇ ಕೇಳಿದಾಗಲೂ ಹಣ ಬಿಡುಗಡೆ ಆಗಿಲ್ಲ.

ತನಿಖಾ ತಂಡ ನೀಡಿದ ವರದಿಯನ್ನ ಮುಖ್ಯ ವೈದ್ಯಾಧಿಕಾರಿಗಳು ಅಂಗಿಕರಿಸಿದ್ದು, ಸರ್ಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಆಗಸ್ಟ್ 7ರಂದು ಸರ್ಕಾರಿ ಸ್ವಾಮ್ಯದ ಬಿಆರ್`ಡಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಎನ್ಐಸಿಯುನಲ್ಲಿ 60 ಮಕ್ಕಳು ಆಕ್ಸಿಜನ್ ಕೊರತೆಯಿಂದ ಸಾವಿಗೀಡಾಗಿದ್ದರು. ಬಳಿಕ ಸಿಎಂ ಯೋಗಿ ಆದಿತ್ಯಾನಾಥ್ ತನಿಖೆಗೆ ಆದೇಶಿಸಿದ್ದರು.

ಇದನ್ನೂ ಒದಿ.. ಬೌನ್ಸರ್ ತಲೆಗೆ ಬಡಿದು ಕ್ರಿಕೆಟಿಗ ಸ್ಥಳದಲ್ಲೇ ಸಾವು..!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments