Webdunia - Bharat's app for daily news and videos

Install App

ಐಎನ್‍ ಎಕ್ಸ್ ಮೀಡಿಯಾ ಪ್ರಕರಣ; ಮಾಜಿ ಸಚಿವ ಪಿ. ಚಿದಂಬರಂರನ್ನು ಅರೆಸ್ಟ್ ಮಾಡಿದ ಸಿಬಿಐ

Webdunia
ಗುರುವಾರ, 22 ಆಗಸ್ಟ್ 2019 (08:55 IST)
ನವದೆಹಲಿ : ಐಎನ್‍ ಎಕ್ಸ್ ಮೀಡಿಯಾ ಪ್ರಕರಣದ ಆರೋಪಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂರನ್ನು ಅವರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.




ಐಎನ್‍ ಎಕ್ಸ್ ಮೀಡಿಯಾ ಲಂಚ ಸ್ವೀಕಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪಿ. ಚಿದಂಬರಂ ಅವರ ಬಂಧನಕ್ಕೆ  ಇಡಿ ಅಧಿಕಾರಿಗಳು ಹಾಗೂ ಸಿಬಿಐ ಅಧಿಕಾರಿಗಳ ತಂಡ ಹುಡುಕಾಟ ನಡೆಸಿದ್ದರು. ಆದರೆ  ಯಾರ ಕೈಗೂ ಸಿಗದ ಅವರು ಏಕಾಏಕಿ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗಿ ಸುದ್ದಿಗೋಷ್ಟಿ ನಡೆಸಿದ್ದರು.


ಸುದ್ದಿಗೋಷ್ಠಿ ನಡೆಸಿದ ಬಳಿಕ ತಮ್ಮ ನಿವಾಸಕ್ಕೆ ತೆರಳಿದ ಪಿ. ಚಿದಂಬರಂ ಅವರ ಬಗ್ಗೆ ಮಾಹಿತಿ ತಿಳಿದ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ನಿವಾಸಕ್ಕೆ ಆಗಮಿಸಿದ್ದರು. ಆದರೆ ಈ ಸಂದರ್ಭದಲ್ಲಿ ಅವರ ನಿವಾಸ ಗೇಟ್ ಬಂದ್ ಆಗಿದ್ದ ಕಾರಣ ಅಧಿಕಾರಿಗಳು ನಿವಾಸದ ಎದುರಿನ ಗೇಟ್ ಹಾಗೂ ಕಾಂಪೌಡ್ ಜಿಗಿದು ನಿವಾಸವನ್ನು ಪ್ರವೇಶಿಸಿ ಅವರನ್ನು ಬಂಧಿಸಿ ಸಿಬಿಐ ಕಚೇರಿಗೆ ಕರೆತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments