Webdunia - Bharat's app for daily news and videos

Install App

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕಿ ಮಧ್ಯೆ ಟ್ವಿಟ್ಟರ್ ಸಮರ

Webdunia
ಸೋಮವಾರ, 23 ಮೇ 2016 (20:14 IST)
ಆಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲನುಭವಿಸಿರುವ ಕುರಿತಂತೆ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿರುವುದಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಚತುರ್ವೇದಿ ಮರು ಟ್ವಿಟ್ ಮಾಡಿದ ನಂತರ ಉಭಯರ ನಡುವೆ ಟ್ವೀಟ್ ಸಮರವೇ ನಡೆದಿದೆ.
 
ಸಚಿವೆ ಸ್ಮತಿ ಇರಾನಿಗೆ ಜೀವ ಬೆದರಿಕೆಯಿದೆ ಎಂದು ಝಡ್‌ ಭದ್ರತೆ ನೀಡಲಾಗಿದೆ. ಆದರೆ, ನಾನು ರೇಪ್‌ಗೊಳಗಾಗುವ ಮತ್ತು ಜೀವಬೆದರಿಕೆ ಕರೆಗಳ ಮಧ್ಯೆ ಹೋರಾಟ ನಡೆಸುತ್ತಿದ್ದೇನೆ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.
 
ನನಗೆ ಝಡ್‌ ಶ್ರೇಣಿಯ ಭದ್ರತೆ ನೀಡಲಾಗಿಲ್ಲ. ಮುಂದಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮರು ಪೋಸ್ಟ್ ಟ್ವೀಟ್ ಮಾಡಿದ್ದಾರೆ ಇರಾನಿ ಟ್ವೀಟ್‌ಗೆ ಮಾರುತ್ತರವಾಗಿ, ನನಗೆ ಗೃಹ ಸಚಿವಾಲಯದ ಅಂತರಿಕ ಕಾರ್ಯನಿರ್ವಹಣೆ ಬಗ್ಗೆ ಗೊತ್ತಿಲ್ಲ. ಮಾಧ್ಯಮಗಳಿಂದ ಗೊತ್ತಾಗಿದ್ದರಿಂದ ಹಾಗೇ ಕೇಳಿದ್ದೇನೆ ಎಂದಿದ್ದಾರೆ. 
 
ಸ್ಮೃತಿ ಇರಾನಿಯವರೇ ಹಾಗಾದಲ್ಲಿ ನಿಮಗೆ ಯಾವುದೇ ಭದ್ರತೆ ಇಲ್ಲವೇ ಎಂದು ಚತುರ್ವೇದಿ ಮರು ಟ್ವೀಟ್ ಮಾಡಿದ್ದಾರೆ. ಇದರಿಂದ ಕೆಂಡಾಮಂಡಲಾದ ಸಚಿವ ಇರಾನಿ, ನನ್ನ ಭದ್ರತೆಯ ಯಾಕೆ ಅಷ್ಟೊಂದು ಆಸಕ್ತಿ ತೋರಿಸುತ್ತಿದ್ದಾರಾ? ಏನಾದರೂ ಪ್ಲ್ಯಾನ್ ಹಾಕಿದ್ದೀರಾ ಎಂದು ಮರು ಟ್ವೀಟ್ ಮಾಡಿದ್ದಾರೆ.
 
ನಾನು ಆ ರೀತಿ ಹೇಳಲಿಲ್ಲ. ಆದ್ದರಿಂದ ಚಿಂತೆ ಮಾಡುವುದು ಬೇಡಿ. ಮತ್ತೊಂದು ವಿಶ್ವವಿದ್ಯಾಲಯದಲ್ಲಿ ಕೋಲಾಹಲ ಸೃಷ್ಟಿಸಿ ಎಂದು ಲೇವಡಿ ಮಾಡಿ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.
 
ಆಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿರುವುದು ರಾಹುಲ್ ಹಣೆಬರಹ, ಶುಭವಾಗಲಿ ಎಂದು ಸ್ಮತಿ ಟ್ವಿಟ್ ಮಾಡಿದ್ದರೆ, ಅದಕ್ಕುತ್ತರವಾಗಿ ಚುನಾವಣೆಯಲ್ಲಿ ಸೋಲನುಭವಿಸಿದ್ದರೂ ಸಚಿವೆಯಾಗಿ ಮೆರೆಯತ್ತಿರುವುದು ನಿಮ್ಮ ಹಣೆಬರಹ, ನಿಮಗೆ ಒಳ್ಳೆಯದಾಗಲಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments