Webdunia - Bharat's app for daily news and videos

Install App

ಸಿಎಎ ಎಂದರೇನು? ನಿಜವಾಗಿಯೂ ಇದು ಮುಸ್ಲಿಮರ ವಿರೋಧಿಯೇ ಇಲ್ಲಿದೆ ಡೀಟೈಲ್ಸ್

Krishnaveni K
ಮಂಗಳವಾರ, 12 ಮಾರ್ಚ್ 2024 (08:40 IST)
Photo Courtesy: Twitter
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಬೆನ್ನಲ್ಲೇ ಮುಸ್ಲಿಮರಿಂದ ವಿರೋಧ ವ್ಯಕ್ತವಾಗುತ್ತಿದೆ. ಅಷ್ಟಕ್ಕೂ ಸಿಎಎ ಎಂದರೆ ಮುಸ್ಲಿಮ್ ವಿರೋಧಿಯೇ? ನಿಜ ವಿಚಾರವೇನು ಇಲ್ಲಿದೆ ಮಾಹಿತಿ.

ಈ ಮೊದಲೇ ಘೋಷಿಸಿದಂತೆ ಲೋಕಸಭೆ ಚುನಾವಣೆಗೂ ಮೊದಲೇ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ  ತಂದಿದೆ. 2019 ರಲ್ಲಿ ಈ ಕಾಯ್ದೆಗೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಲಾಗಿತ್ತು. ಇದೀಗ ಕಾಯ್ದೆ ಜಾರಿಗೊಳಿಸಲಾಗಿದೆ. ಈ ಬಗ್ಗೆ ಗೃಹಸಚಿವ ಅಮಿತ್ ಶಾ ಕಳೆದ ತಿಂಗಳೇ ಘೋಷಣೆ ಮಾಡಿದ್ದರು.

ಆದರೆ ಇದರ ಬೆನ್ನಲ್ಲೇ ಕೆಲವು ಮುಸ್ಲಿಂ ಸಂಘಟನೆಯ, ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಮುಸ್ಲಿಮರ ವಿರೋಧಿ ಎನ್ನುತ್ತಿದ್ದಾರೆ. ಆದರೆ ನಿಜವಾಗಿ ಇದು ಯಾರಿಗೆ ಲಾಭ? ಮುಸ್ಲಿಮರಿಗೆ ತೊಂದರೆಯೇ? ಎನ್ನುವುದಕ್ಕೆ ಇಲ್ಲಿದೆ ಉತ್ತರ. ಸಿಎಎ ಎನ್ನುವುದು 2014 ಡಿಸೆಂಬರ್ 31 ರಿಂದ ನಂತರ ಭಾರತದಲ್ಲೇ ನೆಲೆಸಿರುವ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಮೂಲದ ಹಿಂದೂ, ಸಿಖ್, ಬೌದ್ಧ, ಕ್ರೈಸ್ತ, ಜೈನ ಮತ್ತು ಪಾರ್ಸಿ ಧರ್ಮದವರಿಗೆ ಖಾಯಂ ಆಗಿ ಭಾರತದ ಪೌರತ್ವ ನೀಡುವುದಾಗಿದೆ. ಆದರೆ ಇದರಲ್ಲಿ ಮುಸ್ಲಿಮರು ಒಳಗೊಂಡಿಲ್ಲ.

ಇದು ಮುಸ್ಲಿಮರ ವಿರೋಧಕ್ಕೆ ಒಂದು ಕಾರಣ. ಮುಸ್ಲಿಮರಿಗೂ ಪೌರತ್ವ ನೀಡಿ. ಮುಸ್ಲಿಮರನ್ನು ಮಾತ್ರ ಕಡೆಗಣಿಸುತ್ತಿರುವುದು ಯಾಕೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇನ್ನು, ಕೆಲವರು ಇದರಿಂದ ಭಾರತೀಯ ಮುಸ್ಲಿಮರ ಪೌರತ್ವಕ್ಕೂ ತೊಂದರೆ ಎಂದು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇದು ಶುದ್ಧ ಸುಳ್ಳು ಎಂದು ಈಗಾಗಲೇ ಕೇಂದ್ರ ಸ್ಪಷ್ಟನೆ ನೀಡಿದೆ. ಇಲ್ಲಿ ಈಗಾಗಲೇ ನೆಲೆಸಿರುವ ಇಲ್ಲಿನ ಪೌರತ್ವ ಹೊಂದಿರುವ ಮುಸ್ಲಿಮರಿಗೆ ಇದರಿಂದ ಯಾವುದೇ ಸಮಸ್ಯೆಯಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments