Webdunia - Bharat's app for daily news and videos

Install App

ದೆಹಲಿ ಪಟ್ಟ ತ್ಯಜಿಸಿ ಗೋವಾ ಸಿಎಂ ಆಗ್ತಾರಾ ಕೇಜ್ರಿವಾಲ್?

Webdunia
ಬುಧವಾರ, 11 ಜನವರಿ 2017 (09:34 IST)
ನವದೆಹಲಿಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ಇತರ ರಾಜ್ಯಗಳಲ್ಲಿ ಸಹ ತನ್ನ ಛಾಪನ್ನು ಮೂಡಿಸಲು ಸತಾಯಗತಾಯ ಪ್ರಯತ್ನಿಸುತ್ತಿದೆ. ಅದರಲ್ಲೂ ಪಂಜಾಬ್‌ನಲ್ಲಿ ಆಪ್ ಪ್ರಭಾವ ಹೆಚ್ಚುತ್ತಿದ್ದು ಅಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಘೋಷಿಸಬೇಕು ಎಂದು ಆಪ್ ತಲಾಶ್ ನಡೆಸುತ್ತಿದೆ.
 
ಮತ್ತೀಗ ಆಪ್ ರಾಷ್ಟ್ರೀಯ ಸಂಚಾಲಕ, ನವದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಪಂಜಾಬ್‌ನಲ್ಲಿ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಗುಸುಗುಸು ಶುರುವಾಗಿದೆ.
 
ಮೊಹಾಲಿಯಲ್ಲಿ ನಡೆದ ಪಕ್ಷದ ರ‍್ಯಾಲಿಯನ್ನುದ್ದೇಶಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಡಿರುವ ಮಾತುಗಳು ಇದಕ್ಕೆ ಮತ್ತಷ್ಟು ಇಂಬು ನೀಡಿವೆ.
 
ಹೌದು, ಸಿಸೋಡಿಯಾ ಕೇಜ್ರಿವಾಲ್ ಪಂಜಾಬ್ ಸಿಎಂ ಅಭ್ಯರ್ಥಿ ಎಂದು ಪ್ರಸ್ತಾಪ ಮಾಡಿದ್ದಾರೆ. ಅರವಿಂದ ಕೇಜ್ರಿವಾರ್ ಪಂಜಾಬ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಭಾವಿಸಿಕೊಂಡು ನಮ್ಮ ಪಕ್ಷಕ್ಕೆ ಮತ ಚಲಾಯಿಸಿ ಎಂದು ಹೇಳುವ ಮೂಲಕ ಅವರು ರಾಜಕೀಯ ವಲಯದಲ್ಲಿ ಹೊಸ ಕುತೂಹಲವನ್ನು ತಂದಿಟ್ಟಿದ್ದಾರೆ. 
 
ಆದರೆ ಬಳಿಕ ಈ ಕುರಿತು ಪತ್ರಕರ್ತರು ಸ್ಪಷ್ಟನೆ ಕೇಳಿದಾಗ , ನೀವೇಕೆ ನನ್ನನ್ನು ಪ್ರಶ್ನಿಸುತ್ತೀರಿ. ಅದನ್ನು ನಿರ್ಣಯಿಸುವವರು ಶಾಸಕರು ಎಂದು ಹೇಳುವ ಮೂಲಕ ಅವರು ಕುತೂಹಲವನ್ನು ಕಾದಿಟ್ಟಿದ್ದಾರೆ. 
 
ಆದರೆ ಪಂಜಾಬ್ ಕಡೆ ಗಮನ ಹರಿಸಲು ಕೇಜ್ರಿವಾಲ್ ದೆಹಲಿ ಪಟ್ಟ ತೊರೆಯುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಮುಂದಿನ ಸುದ್ದಿ
Show comments