Webdunia - Bharat's app for daily news and videos

Install App

ರಾಜ್ಯಗಳಿಗೆ ಕಾಡಲಿದೆಯೇ ವಿದ್ಯುತ್ ಸಮಸ್ಯೆ?

Webdunia
ಭಾನುವಾರ, 10 ಅಕ್ಟೋಬರ್ 2021 (11:05 IST)
ನವದೆಹಲಿ : ದೇಶದಲ್ಲಿ ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ. ವಾಡಿಕೆಗಿಂತಲೂ ಹೆಚ್ಚಾಗಿರುವ ಮಳೆ ಕಲ್ಲಿದ್ದಲು ಪೂರೈಕೆ ಮೇಲೆ ಪರಿಣಾಮ ಬೀರಿರುವುದು, ಆಮದು ಕಲ್ಲಿದ್ದಲು ಅವಲಂಬಿಸಿದ್ದ ಸ್ಥಾವರಗಳು ಕಲ್ಲಿದ್ದಲು ದರ ಏರಿಕೆಯಿಂದಾಗಿ ಉತ್ಪಾದನೆ ಕಡಿತಗೊಳಿಸಿರುವುದು ಇದಕ್ಕೆ ಕಾರಣವಾಗಿದೆ.

ಕಲ್ಲಿದ್ದಲು ಉತ್ಪಾದನೆ ತೃಪ್ತಿಕರವಾಗಿದ್ದರೂ ಮಳೆಯಿಂದಾಗಿ ಸರಬರಾಜು ವ್ಯತ್ಯಯವಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಗುಜರಾತ್, ಪಂಜಾಬ್, ರಾಜಸ್ಥಾನ, ದೆಹಲಿ ಮತ್ತು ತಮಿಳುನಾಡಿನಲ್ಲಿ ವಿದ್ಯುತ್ ಸಮಸ್ಯೆ ತೋರುವ ಸೂಚನೆಗಳು ಇವೆ.
ಇರುವ ಕಲ್ಲಿದ್ದಲು ದಾಸ್ತಾನು ಒಂದೆರಡು ದಿನಗಳಿಗೆ ಸಾಕಾಗಬಹುದು. ಹೀಗಾಗಿ, ವಿದ್ಯುತ್ ಉತ್ಪಾದನೆ ಸ್ಥಗಿತವಾಗಬಹುದು ಎಂಬ ಎಚ್ಚರಿಕೆಯನ್ನು ವಿವಿಧ ಖಾಸಗಿ ಶಾಖೋತ್ಪನ್ನ ಸ್ಥಾವರಗಳ ಅಧಿಕಾರಿಗಳು, ಪೂರೈಕೆದಾರರು ನೀಡಿದ್ದಾರೆ.
ಆದರೆ, ಕಲ್ಲಿದ್ದಲು ಸಚಿವಾಲಯವು ದೇಶದಲ್ಲಿ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ದಾಸ್ತಾನು ಇದೆ ಎಂದು ಹೇಳಿದ್ದು, ಪೂರ್ಣವಾಗಿ ವಿದ್ಯುತ್ ಉತ್ಪಾದನೆ ಸ್ಥಗಿತವಾಗಲಿದೆ ಎಂಬ ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರತಿಪಾದಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments