Webdunia - Bharat's app for daily news and videos

Install App

ಮಾನವೀಯತೆ ಪದದ ಅರ್ಥ ಗೊತ್ತಿಲ್ಲದವರು ಇಸ್ರೇಲಿಗರು: ಆಕ್ರೋಶ ಹೊರಹಾಕಿದ ಪ್ರಿಯಾಂಕಾ ಗಾಂಧಿ

Sampriya
ಬುಧವಾರ, 19 ಮಾರ್ಚ್ 2025 (19:26 IST)
Photo Courtesy X
ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಇಸ್ರೇಲ್ ಸರ್ಕಾರವನ್ನು ಟೀಕಿಸಿದ್ದಾರೆ, "400 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ ನಾಗರಿಕರ ಕ್ರೂರ ಹತ್ಯೆ ಸಂಬಂಧ ಆಕ್ರೋಶ ಹೊರಹಾಕಿದ ಪ್ರಿಯಾಂಕಾ ಗಾಂಧಿ ವಾದ್ರಾ ಇಸ್ರೇಲ್‌ನವರಲ್ಲಿ ಮಾನವೀಯತೆಗೆ  ಯಾವುದೇ ಬೆಲೆ ಇಲ್ಲ ಎಂದು ಈ ಮೂಲಕ ಸಾಬೀತುಪಡಿಸಿದ್ದಾರೆ ಎಂದಿದ್ದಾರೆ.

ಅವರ ಈ ರೀತಿಯ ವರ್ತನೆಯಿಂದ ತಮ್ಮನ್ನು ತಾವು ಹೇಡಿಗಳಂತೆ ಬಹಿರಂಗಪಡಿಸುತ್ತಿದ್ದಾರೆ ಎಂದು ಟೀಕಿಸಿದರು.

X ನಲ್ಲಿ ಪೋಸ್ಟ್ ಹಂಚಿಕೊಂಡ ವಯನಾಡ್ ಸಂಸದೆ ಪ್ರಿಯಾಂಕಾ, "ಇಸ್ರೇಲ್ ಸರ್ಕಾರದಿಂದ 130 ಮಕ್ಕಳು ಸೇರಿದಂತೆ 400 ಕ್ಕೂ ಹೆಚ್ಚು ಮುಗ್ಧ ನಾಗರಿಕರ ಕ್ರೂರ ಹತ್ಯೆಯಾಗಿದೆ. ಈ ಮೂಲಕ ಅವರಿಗೆ
ಮಾನವೀಯತೆ ಎಂದರೆ ಏನೆಂಬುದು ತಿಳಿದಿಲ್ಲ. ಅವರ ಕ್ರಿಯೆಗಳು ಅಂತರ್ಗತ ದೌರ್ಬಲ್ಯ ಮತ್ತು ತಮ್ಮದೇ ಆದ ಸತ್ಯವನ್ನು ಎದುರಿಸಲು ಅಸಮರ್ಥತೆಯನ್ನು ಪ್ರತಿಬಿಂಬಿಸುತ್ತವೆ."

'ಇಸ್ರೇಲ್ ನರಮೇಧವನ್ನು ಪಾಶ್ಚಿಮಾತ್ಯ ಶಕ್ತಿಗಳು ಬೆಂಬಲಿಸಿದರೂ ಆತ್ಮಸಾಕ್ಷಿ ಹೊಂದಿರುವ ಜಗತ್ತಿನ ಎಲ್ಲ ನಾಗರಿಕರು ಖಂಡಿಸುತ್ತಾರೆ. ಈ ದಾಳಿಯು ದೌರ್ಬಲ್ಯ ಮತ್ತು ಸತ್ಯವನ್ನು ಎದುರಿಸುವಲ್ಲಿ ಇಸ್ರೇಲ್ ಅಸಮರ್ಥತೆಯನ್ನು ತೋರಿಸುತ್ತದೆ' ಎಂದು ಪ್ರಿಯಾಂಕಾ ಹೇಳಿದ್ದಾರೆ.

'ಇಸ್ರೇಲ್ ಸರ್ಕಾರ ಕ್ರೂರವಾಗಿ ವರ್ತಿಸಿದಷ್ಟು ನಿಜಕ್ಕೂ ಹೇಡಿತನವನ್ನು ಬಹಿರಂಗಪಡಿಸುತ್ತದೆ. ಮತ್ತೊಂದೆಡೆ ಪಾಲೆಸ್ಟೀನಿಯರ ಧೈರ್ಯ ಮೇಲುಗೈ ಸಾಧಿಸುತ್ತದೆ. ಅವರು ಊಹಿಸಲು ಸಾಧ್ಯವಾಗದಷ್ಟು ನೋವನ್ನು ಸಹಿಸಿಕೊಂಡಿದ್ದಾರೆ. ಅವರ ಛಲ ಅಚಲವಾಗಿ ಉಳಿದಿದೆ. ಸತ್ಯಮೇವ ಜಯತೇ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮುಂದಿನ ಸುದ್ದಿ
Show comments