ಐಟಿ ದಾಳಿ: ಬರೋಬ್ಬರಿ ₹257 ಕೋಟಿ ಜಪ್ತಿ!

Webdunia
ಸೋಮವಾರ, 27 ಡಿಸೆಂಬರ್ 2021 (07:32 IST)
ದೆಹಲಿ : ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಎಂಬಾತನನ್ನು ಬಂಧಿಸಲಾಗಿದೆ.

ಜಿಎಸ್ಟಿ ಇಂಟೆಲಿಜೆನ್ಸ್ ಅಧಿಕಾರಿಗಳಿಂದ ಉದ್ಯಮಿಯನ್ನು ಸೆರೆ ಹಿಡಿಯಲಾಗಿದೆ. ಉತ್ತರ ಪ್ರದೇಶದ ಕಾನ್ಪುರದ ಸುಗಂಧದ್ರವ್ಯ ಉದ್ಯಮಿ ಬಳಿಯಿಂದ 257 ಕೋಟಿ ರೂ. ಜಪ್ತಿ ಮಾಡಿರುವ ಅಧಿಕಾರಿಗಳು, ಸೋಮವಾರ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಕಾನ್ಪುರದ ಸುಗಂಧ ದ್ರವ್ಯ  ಉದ್ಯಮಿ ಪಿಯೂಷ್ ಜೈನ್ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಇದುವರೆಗೆ ₹ 180 ಕೋಟಿ ನಗದು ವಶಪಡಿಸಲಾಗಿದೆ ಎಂದು ಐಟಿ ಇಲಾಖೆ ಮೂಲಗಳು ಶುಕ್ರವಾರ ಬೆಳಿಗ್ಗೆ ತಿಳಿಸಿತ್ತು. ದಾಳಿಯ ಛಾಯಾಚಿತ್ರಗಳು ಎರಡು ದೊಡ್ಡ ವಾರ್ಡ್‌ರೋಬ್‌ಗಳಲ್ಲಿ ರಾಶಿ ಹಣವನ್ನು ತುಂಬಿರುವುದನ್ನು ತೋರಿಸಿತ್ತು.

ಎಲ್ಲಾ ಕಟ್ಟುಗಳನ್ನು ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುತ್ತಿ ಹಳದಿ ಟೇಪ್‌ನಿಂದ ಭದ್ರಪಡಿಸಲಾಗಿದೆ. ಪ್ರತಿ ಫೋಟೋದಲ್ಲಿ 30 ಕ್ಕೂ ಹೆಚ್ಚು ಕಟ್ಟುಗಳು ಗೋಚರಿಸುತ್ತವೆ ಎಂದು ಎನ್ಡಿಟಿವಿ ವರದಿ ಮಾಡಿದೆ. ವಶಪಡಿಸಿಕೊಂಡ ಒಟ್ಟು ಹಣವನ್ನು  ಇನ್ನೂ ಎಣಿಕೆ ಮಾಡಲಾಗುತ್ತಿದೆ. ಗುರುವಾರದಿಂದ ದಾಳಿ ಆರಂಭವಾಗಿದ್ದು, ಇನ್ನೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಮುಂದಿನ ಸುದ್ದಿ
Show comments