Webdunia - Bharat's app for daily news and videos

Install App

ಬೀದಿಗಳಲ್ಲಿ ನಡೆಯಲು ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಅಸಾಧ್ಯ : ರಾಹುಲ್ ಗಾಂಧಿ

Webdunia
ಮಂಗಳವಾರ, 31 ಜನವರಿ 2023 (10:42 IST)
ಶ್ರೀನಗರ : ಜಮ್ಮು-ಕಾಶ್ಮೀರದ ಬೀದಿಗಳಲ್ಲಿ ನಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಯಾವುದೇ ಬಿಜೆಪಿ ನಾಯಕರಿಗೂ ಸಾಧ್ಯವಿಲ್ಲ. ಏಕೆಂದರೆ ಅವರಿಗೆ ಭಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಸರಿಯಾದ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ ಎನ್ನುವುದಾದರೆ ಅಮಿತ್ ಶಾ ಜಮ್ಮುವಿನಿಂದ ಶ್ರೀನಗರದ ಲಾಲ್ ಚೌಕ್ವರೆಗೆ ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕಾಗಿ ಅಲ್ಲ. ದೇಶದ ಹಿತಕ್ಕಾಗಿ ಮಾಡಿದ ಯಾತ್ರೆ ಇದು. ದೇಶದ ಅನೇಕತೆ, ಜಾತ್ಯಾತೀತತೆಯನ್ನು ಉಳಿಸಲು ಈ ಯಾತ್ರೆ ಕೈಗೊಂಡೆ. ಪ್ರಜೆಗಳಿಂದ ಸಿಕ್ಕ ಅಭೂತಪೂರ್ವ ಪ್ರತಿಕ್ರಿಯೆ ಕಂಡು ನನ್ನ ಕಣ್ಣಲ್ಲಿ ನೀರು ಬಂದಿದೆ.

ಒಂದು ಹಂತದಲ್ಲಿ ಜೋಡೋ ಯಾತ್ರೆ ಪೂರ್ಣಗೊಳಿಸುವೆನಾ ಎಂಬ ಪ್ರಶ್ನೆ ನನ್ನಲ್ಲಿ ಮೂಡಿತ್ತು. ಮಳೆ, ಚಳಿ ಲೆಕ್ಕಿಸದೇ ಪ್ರಜೆಗಳು ಬಂದಿದ್ದಾರೆ. ಈ ಯಾತ್ರೆಯುದ್ದಕ್ಕೂ ನಾನು ಅನೇಕ ಪಾಠಗಳನ್ನು ಕಲಿತೆ. ಜನರ ದೀನಸ್ಥಿತಿ ಕಂಡು ಟೀಶರ್ಟ್ನಲ್ಲೇ ಯಾತ್ರೆ ಮಾಡಲು ನಿರ್ಣಯಿಸಿದೆ ಎಂದು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments