Webdunia - Bharat's app for daily news and videos

Install App

'ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನನ್ನನ್ನು ಬಂಧಿಸಿದ್ದಾರೆ ಎಂಬುದು ನಿಜವಲ್ಲ'; ಜಮೀರ್ ಅಹ್ಮದ್

Webdunia
ಭಾನುವಾರ, 10 ಅಕ್ಟೋಬರ್ 2021 (09:32 IST)
ನವದೆಹಲಿ (ಅ 10) : "ಜಾರಿ ನಿರ್ದೇಶನಾಲಯ ಅಧಿಕಾರಿಗಳು ನನ್ನನ್ನು ಬಂಧಿಸಿದ್ದಾರೆ ಎಂಬ ಸುದ್ದಿ ನಿಜವಲ್ಲ. ಆಸ್ತಿ ಸಂಪಾದನೆ ಕುರಿತು ವಿಚಾರಣೆಗೆ ಕರೆದಿದ್ದರು, ಇದೀಗ ವಿಚಾರಣೆ ಮುಗಿಸಿ ತೆರಳಿದ್ದೇನೆ.

ನನ್ನನ್ನು ಬಂಧಿಸಿಲ್ಲ" ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಐಎಂಎ ಹಗರಣ ಬೆಳಕಿಗೆ ಬಂದಾಗಿನಿಂದಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಮೀರ್ ಅಹ್ಮದ್ ಅವರ ಆಸ್ತಿ ಗಳಿಕೆ, ಅಕ್ರಮ ಆಸ್ತಿ ಮತ್ತು ಹಣದ ವ್ಯವಹಾರದ ಬಗ್ಗೆ ವಿಚಾರಣೆ ನಡೆಸುತ್ತಲೇ ಇದ್ದಾರೆ. ಇದೀಗ ಇಡಿ ಅಧಿಕಾರಿಗಳು ಕಳೆದ 3 ದಿನಗಳಿಂದ ಜಮೀರ್ ಅಹಮದ್ ಗೆ ನಿರಂತರ ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿದಿನವೂ ಇಡಿ ಕಚೇರಿಗೆ ಬಂದು ವಿಚಾರಣೆ ಎದುರಿಸುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
ಆದರೆ, ಈ ಬಗ್ಗೆ ದೆಹಲಿಯಲ್ಲಿ ಸ್ಪಷ್ಟನೆ ನೀಡಿರುವ ಜಮೀರ್ ಅಹ್ಮದ್, "ಇಡಿ ಬಂಧನ ಅನ್ನೊದು ನಿಜವಲ್ಲ. ಒಂದು ಬಾರಿ ಮಾತ್ರ ವಿಚಾರಣೆಗೆ ಕರೆದಿದ್ದರು. ಇಡಿ ಅಧಿಕಾರಿಗಳು ಕೆಲ ಮಾಹಿತಿ ಕೇಳಿದ್ದರು. ಈಗಾಗಲೇ ಇಡಿ ಕೇಳಿರುವ ಎಲ್ಲಾ ಮಾಹಿತಿಯನ್ನೂ ಕೊಟ್ಟಿದ್ದೇನೆ. ನನ್ನನ್ನು ಅರ್ಧ ಗಂಟೆ ಮಾತ್ರ ಮಾತನಾಡಿಸಿದರು. ಅರೆಸ್ಟ್ ಮಾಡುವುದಾಗಿದ್ದರೆ ಅರ್ಧ ಗಂಟೆಯಲ್ಲೆ ವಿಚಾರಣೆ ಮುಗಿಯುತ್ತಿರಲಿಲ್ಲ. ಇಡಿ ಬಂಧನ ಎಂಬುದು ಸುಳ್ಳು ಸುದ್ದಿ. ಮತ್ತೆ ವಿಚಾರಣೆಗೆ ಬರುವಂತೆ ನನ್ನನ್ನು ಕರೆದಿಲ್ಲ. ಸೋಮವಾರ ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments