Webdunia - Bharat's app for daily news and videos

Install App

ಇದು ಸುಳ್ಳು: ರಾಜ್ಯಪಾಲರಿಗೆ ಶಶಿಕಲಾ ಆತ್ಮಹತ್ಯೆ ಬೆದರಿಕೆ ಪತ್ರ

Webdunia
ಸೋಮವಾರ, 13 ಫೆಬ್ರವರಿ 2017 (07:26 IST)
ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರು ಬರೆದಿರುವುದೆನ್ನಲಾದ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವ ಆತ್ಮಹತ್ಯಾ ಬೆದರಿಕೆ ಪತ್ರ ನಕಲಿ ಎಂದು ತಿಳಿದುಬಂದಿದೆ. ಈ ಪತ್ರದಲ್ಲಿ ರಾಜ್ಯಪಾಲರು ತಕ್ಷಣಕ್ಕೆ ಸರ್ಕಾರ ರಚಿಸಲು ಆಹ್ವಾನಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಲಾಗಿದೆ.
 
ಎಐಡಿಎಂಕೆ ಅಧಿಕೃತ ಲೆಟರ್ ಪ್ಯಾಡ್‌ನಲ್ಲಿರುವಂತೆ ಕಂಡುಬಂದಿರುವ ಈ ಪತ್ರ ವಿ.ಕೆ ಶಶಿಕಲಾ ಹೆಸರಲ್ಲಿದ್ದು, ರಾಜ್ಯಪಾಲರಿಗೆ ಸಂಬೋಧಿಸಿ ಬರೆಯಲಾಗಿದೆ.
 
ಪತ್ರದ ಒಕ್ಕಣಿಕೆ ಹೀಗಿದೆ: ಸರ್ ನನ್ನನ್ನು ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸುವಂತೆ ಆಹ್ವಾನಿಸಲು ನೀವು ವಿಳಂಬ ಮಾಡುತ್ತಿರುವಿರಿ. ಪರಿಣಾಮ ನಾನು ಬಂಧಿಸಿಟ್ಟಿರುವ ಶಾಸಕರು ಒಬ್ಬೊಬ್ಬರಾಗಿ ಒ.ಪನ್ನೀರ್ ಸೆಲ್ವಂ ಪಾಳಯಕ್ಕೆ ಸೇರಿಕೊಳ್ಳುತ್ತಿದ್ದಾರೆ. ನನ್ನ ತಾಳ್ಮೆಗೂ ಒಂದು ಮಿತಿ ಇದೆ. ನೀವು ಮತ್ತೂ ಹೆಚ್ಚು ಸಮಯವನ್ನು ತೆಗೆದುಕೊಂಡರೆ ನಾನು ಸಾವಿಗೆ ಶರಣಾಗುತ್ತೇನೆ ಮತ್ತು ನನ್ನ ನಡೆಗೆ ನೀವೇ ಜವಾಬ್ದಾರರು ಎಂದು ಬರೆದಿಡುತ್ತೇನೆ.
 
ಮತ್ತೀಗ ಈ ಪತ್ರವನ್ನು ತಮ್ಮ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿ ಸ್ಪಷ್ಟನೆ ನೀಡಿರುವ ಎಐಡಿಎಂಕೆ, ಇದು ಶಶಿಕಲಾ ಬರೆದಿರುವ ಪತ್ರವಲ್ಲ ಎಂದಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments