Webdunia - Bharat's app for daily news and videos

Install App

ಗಾಂಧಿ ಹತ್ಯೆಗೆ ಇಟಲಿ ನಂಟು: ಆಗಸ್ಟ್ 15 ರ ಬಳಿಕ ರಹಸ್ಯ ಬಹಿರಂಗ?

Webdunia
ಗುರುವಾರ, 28 ಜುಲೈ 2016 (17:09 IST)
ಸದಾ ಸ್ಪೋಟಕ ಮಾಹಿತಿ ಹೊರಹಾಕುವ, ವಿವಾದವನ್ನು ಸೃಷ್ಟಿಸುವ ರಾಜಸಭಾ ಸಂಸದ, ಬಿಜೆಪಿಯ  ಫೈರ್ ಬ್ರಾಂಡ್ ನಾಯಕ ಸಂಸದ ಸುಬ್ರಮಣಿಯನ್ ಸ್ವಾಮಿ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.ಮಹಾತ್ಮ ಗಾಂಧಿ ಹತ್ಯೆಗೂ ಇಟಲಿಗೂ ಸಂಬಂಧವಿದೆ. ಅದನ್ನು ಆಗಸ್ಟ್ 15ರ ಬಳಿಕ ಬಹಿರಂಗ ಪಡಿಸುವುದಾಗಿ ಅವರು ಹೇಳಿದ್ದಾರೆ.

ಮಹಾತ್ಮಾ ಗಾಂಧಿ ಹತ್ಯೆ ಕುರಿತಂತೆ ಸಂಸತ್ತಿನಲ್ಲಿ ಚರ್ಚೆಯಾಗಬೇಕೆಂದು ಎಂದು ಪಟ್ಟು ಹಿಡಿದಿರುವ ಸುಬ್ರಮಣಿಯನ್ ಸ್ವಾಮಿ ಗಾಂಧೀಜಿಯವರನ್ನು ಕೊಲ್ಲಲ್ಲು ನಾಥೂರಾಮ್ ಗೂಡ್ಸೆ ಬಳಸಿದ ಗನ್ ಇಟಲಿಯಿಂದ ಆಮದು ಮಾಡಿಕೊಂಡಿದ್ದು .  ಹೀಗಾಗಿ ಮಹಾತ್ಮ ಗಾಂಧಿ ಹತ್ಯೆಗೂ ಹಾಗೂ ಇಟಲಿಯ ಅಜ್ಞಾತ ವ್ಯಕ್ತಿಗೂ ಸಂಬಂಧವಿದೆ. ಆಗಸ್ಟ್‌ 15ರ ಬಳಿಕ ಸುದ್ದಿಗೋಷ್ಠಿ ನಡೆಸಿ ಅದರ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಲಿದ್ದೇನೆ' ಎಂದು ಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಈ ಮೂಲಕ ಅವರು ಹೊಸ ವಿಷಯವನ್ನು ಚರ್ಚೆಗೆ ತಂದಿದ್ದಾರೆ.

ಇತ್ತೀಚಿಗೆ ಬಹಿರಂಗವಾಗಿರುವ ಮಹಾತ್ಮಾ ಗಾಂಧಿಯವರ ಹತ್ಯೆ ಕುರಿತಾದ ರಹಸ್ಯ ಕಡತಗಳಲ್ಲಿರುವ ಮಾಹಿತಿಯ ಪ್ರಕಾರ ಗಾಂಧಿ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಗುರಿಪಡಿಸಲಾಗಿಲ್ಲ. ಹೀಗಾಗಿ ಅವರು ಗೋಡ್ಸೆ ಗುಂಡೇಟಿಗೆ ಸಾವನ್ನಪ್ಪಿದ್ದಾರೆ ಎಂಬುದು ಸಹ ಖಚಿತವಾಗಿಲ್ಲ ಎಂದು ಅವರು ಹೇಳಿದ್ದಾರೆ.

1948ರ ಜನವರಿ 30ರಂದು ಪ್ರಾರ್ಥನಾ ಸಭೆಯಲ್ಲಿ  ನಾಥೂರಾಮ್ ಗೋಡ್ಸೆ  ಮಹಾತ್ಮಾ ಗಾಂಧೀಜಿಯವರನ್ನು ಗುಂಡಿಕ್ಕಿ ಕೊಂದಿದ್ದ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments