ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

Sampriya
ಬುಧವಾರ, 23 ಜುಲೈ 2025 (18:54 IST)
Photo Credit X
ನವದೆಹಲಿ: ಅನಾರೋಗ್ಯದ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಆ ಹುದ್ದೆಗೆ ಚುನಾವಣಾ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ ಪ್ರಾರಂಭಿಸಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಹೊರಡಿಸಿದ ಗೆಜೆಟ್ ಅಧಿಸೂಚನೆಯ ಮೂಲಕ ಧನಕರ್ ಅವರ ರಾಜೀನಾಮೆ ಅಂಗೀಕರಿಸಿರುವುದನ್ನು ಅಧಿಕೃತವಾಗಿ ತಿಳಿಸಿದೆ. ಈ ಮೂಲಕ ಸಾಂವಿಧಾನಿಕ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಚುನಾವಣಾ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟಿದೆ.

ಉಪರಾಷ್ಟ್ರಪತಿ ಚುನಾವಣೆಗೆ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ ಮತ್ತು ಚುನಾವಣೆಗೆ ಅಧಿಕೃತ ವೇಳಾಪಟ್ಟಿಯನ್ನು ಚುನಾವಣಾ ಪೂರ್ವ ಚಟುವಟಿಕೆಗಳು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಉಪ ರಾಷ್ಟ್ರಪತಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.

ಆಡಳಿತರೂಢ ಬಿಜೆಪಿ ನೇತೃತ್ವದ ಎನ್​ಡಿಎ ಲೋಕಸಭೆಯಲ್ಲಿ 293 ಸದಸ್ಯರ ಬೆಂಬಲವನ್ನು ಹೊಂದಿದೆ (542 ಸದಸ್ಯರು) ರಾಜ್ಯಸಭೆಯಲ್ಲಿ 129 ಸದಸ್ಯರ ಬೆಂಬಲವನ್ನು ಹೊಂದಿದೆ. ಇನ್ನು ನಾಮನಿರ್ದೇಶಿತ ಸದಸ್ಯರುಗಳನ್ನು ಸೇರಿಸಿದರೆ, ಆಡಳಿತ ಒಕ್ಕೂಟವು 786 ಸದಸ್ಯರಲ್ಲಿ 422 ಸದಸ್ಯರ ಬೆಂಬಲವನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments