ಉತ್ತರ ಪತ್ರಿಕೆಯಲ್ಲಿ ಜೈಶ್ರೀರಾಮ್ ಎಂದು ಬರೆದವನಿಗೆ ಅಂಕ: ಪ್ರಾಧ್ಯಾಪಕ ಅಮಾನತು

Krishnaveni K
ಶನಿವಾರ, 27 ಏಪ್ರಿಲ್ 2024 (10:58 IST)
ಲಕ್ನೋ: ಉತ್ತರ ಪ್ರದೇಶದ ವಿಶ್ವಿವಿದ್ಯಾನಿಲಯವೊಂದರಲ್ಲಿ ಜೈ ಶ್ರೀರಾಮ್ ಎಂದು ಬರೆದ ವಿದ್ಯಾರ್ಥಿಯೊಬ್ಬನಿಗೆ ಅಂಕ ನೀಡಿದ್ದಕ್ಕಾಗಿ ಪ್ರಾಧ‍್ಯಾಪಕರೊಬ್ಬರು ಅಮಾನತಾಗಿದ್ದಾರೆ.

ಪರೀಕ್ಷೆಯಲ್ಲಿ ಉತ್ತರ ಬರೆಯುವ ಬದಲು ಜೈಶ್ರೀರಾಮ್ ಮತ್ತು ಕ್ರಿಕೆಟಿಗರ ಹೆಸರು ಬರೆದಿದ್ದಾನೆ. ಇದಕ್ಕೆ ಅಧ್ಯಾಪಕರೂ ಅಂಕ ನೀಡಿದ್ದಾರೆ. ಹಣ ಪಡೆದು ಈ ರೀತಿ ಅಂಕ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

ಜೌನ್ ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ‍್ಯಾಪಕರನ್ನು ಘಟನೆ ಸಂಬಂಧ ಅಮಾನತುಗಳಿಸಲಾಗಿದೆ. ವಿಶ್ವ ವಿದ್ಯಾಲಯವು ಅಧಿಕಾರಿಗಳ ಸಹಾಯದಿಂದ ಸೊನ್ನೆ ಸುತ್ತಿದ್ದ ವಿದ್ಯಾರ್ಥಿಗಳಿಗೂ 60% ಮಾರ್ಕ್ಸ್ ನೀಡಿ ಪಾಸ್ ಮಾಡಿತ್ತು. ಈ ಸಂಬಂಧ ವಿವಿಯ ವಿದ್ಯಾರ್ಥಿ ಮುಖಂಡ ಮುಖ್ಯಮಂತ್ರಿ, ರಾಜ್ಯಪಾಲರು, ಉಪಕುಲಪತಿಗಳಿಗೆ ಪತ್ರ ಬರೆದು ದೂರು ನೀಡಿದ್ದರು.

ಇದೀಗ ದೂರಿನ ಬೆನ್ನಲ್ಲೇ ಉಪಕುಲಪತಿಗಳು ಪ್ರತ್ಯೇಕ ಸಮಿತಿ ರಚಿಸಿ ತನಿಖೆಗೆ ಮುಂದಾಗಿದ್ದಾರೆ. ಅಲ್ಲದೆ ಇಂತಹ  ಘಟನೆ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಲು ಮುಂದಾಗಿದ್ದಾರೆ. ಸದ್ಯಕ್ಕೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಅದಾದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಉಪಕುಲಪತಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಓಡಿ ಮಹೇಶಣ್ಣ ಓಡಿ ಎಂದು ಕಾಲೆಳೆದ ಕಿರಿಕ್ ಕೀರ್ತಿ

ಕಲಬುರಗಿಯಲ್ಲಿ ಮಳೆ ಹಾನಿ: ಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಕೈಗೊಂಡ ಕ್ರಮಗಳು ಇಂತಿವೆ

ಇನ್ನೊಂದು ವರ್ಷ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗಿಲ್ಲ ದಕ ಜಿಲ್ಲೆಗೆ ಎಂಟ್ರಿ

ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅವಿತು ಕಾಬೂಲ್‌ನಿಂದ ದೆಹಲಿಗೆ ಬಂದ ಬಾಲಕ

ಮುಂದಿನ ಸುದ್ದಿ
Show comments