Webdunia - Bharat's app for daily news and videos

Install App

ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ

Webdunia
ಭಾನುವಾರ, 11 ಡಿಸೆಂಬರ್ 2022 (09:46 IST)
ನವದೆಹಲಿ : ಮುಂಬೈ ಮೂಲದ ಯುವತಿ ಶ್ರದ್ಧಾವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಸಾಕೇತ್ ಜಿಲ್ಲಾ ನ್ಯಾಯಲಯದ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ 14 ದಿನಗಳಿಗೆ ನ್ಯಾಯಂಗ ಬಂಧನವನ್ನು ವಿಸ್ತರಣೆ ಮಾಡಿತು. ಅಫ್ತಾಬ್ ಬುದ್ಧಿವಂತ ಯುವಕನಾಗಿದ್ದು ತನಿಖೆಯಲ್ಲಿ ಪೊಲೀಸರು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆ.

ಆಗಾಗ್ಗೆ ಹೇಳಿಕೆ ಬದಲಿಸುತ್ತಾನೆ ಮತ್ತು ಹೊಸ ಮಾಹಿತಿಯನ್ನು ನೀಡುತ್ತಿದ್ದಾನೆ ಇವುಗಳ ಆಧಾರದ ಮೇಲೆ ತನಿಖೆ ನಡೆಸಬೇಕಿದೆ. 

ಜೈಲಿನಲ್ಲಿ ಇಬ್ಬರು ಕೈದಿಗಳ ಜೊತೆಗೆ ಅಫ್ತಾಬ್ ಇದ್ದು ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಮಂಪರು ಪರೀಕ್ಷೆ ಮತ್ತು ಫಾಲಿಗ್ರಾಫ್ ಪರೀಕ್ಷೆ ಅಂತ್ಯವಾಗಿದ್ದು, ಅದನ್ನು ಆಧರಿಸಿ ನಡೆಯುತ್ತಿರುವ ತನಿಖೆ ಪ್ರಗತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments