Select Your Language

Notifications

webdunia
webdunia
webdunia
webdunia

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

Jairam Ramesh

Krishnaveni K

ನವದೆಹಲಿ , ಬುಧವಾರ, 25 ಜೂನ್ 2025 (14:57 IST)
ನವದೆಹಲಿ 1975 ರ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಘೋಷಣೆ ಘಟಿಸಿ ಇಂದಿಗೆ 50 ವರ್ಷಗಳಾಗಿವೆ. ಈ ಹಿನ್ನಲೆಯಲ್ಲಿ ಬಿಜೆಪಿ ಟೀಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದ ಜೈರಾಂ ರಮೇಶ್ ಮೋದಿ ಸರ್ಕಾರದಿಂದ 11 ವರ್ಷಗಳಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ ಎಂದು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಹಾಗಿದ್ದರೆ ನೀವ್ಯಾಕೆ ಇನ್ನೂ ಅರೆಸ್ಟ್ ಆಗಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದಾಗ ಸರ್ಕಾರವನ್ನು ವಿರೋಧಿಸುವವರು, ಪ್ರಶ್ನಿಸುವವರು ಎಲ್ಲರನ್ನೂ ಬಂಧಿಸಲಾಗುತ್ತಿತ್ತು. ಮಾಧ್ಯಮ ಸ್ವಾತಂತ್ರ್ಯವಿರಲಿಲ್ಲ. ಹೀಗಾಗಿ ಈಗ 11 ವರ್ಷದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ ಎಂದ ಜೈರಾಂ ರಮೇಶ್ ಗೆ ನೆಟ್ಟಿಗರು ತಿರುಗೇಟು ಕೊಟ್ಟಿದ್ದಾರೆ.

ತುರ್ತು ಪರಿಸ್ಥಿತಿ ಎಂದರೆ ಈ ರೀತಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧವೇ ಟೀಕೆ ಮಾಡಲು ಸಾಧ್ಯವೇ? ಹಾಗೊಂದು ವೇಳೆ ಮಾಡಿದ್ದರೆ ನಿಮ್ಮನ್ನು ಅರೆಸ್ಟ್ ಮಾಡುತ್ತಿರಲಿಲ್ಲವೇ? ತುರ್ತು ಪರಿಸ್ಥಿತಿಯಲ್ಲಿ ಇಷ್ಟೊಂದು ಸ್ವಾತಂತ್ರ್ಯವಿರಲು ಸಾಧ್ಯವಿಲ್ಲವಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ್ದೇ ಕಾಂಗ್ರೆಸ್ ಮಾಡಿದ ದೊಡ್ಡ ತಪ್ಪು. ಈಗ ಅದನ್ನೂ ಸಮರ್ಥಿಸಿಕೊಳ್ಳುತ್ತಿದ್ದೀರಲ್ಲಾ? ಏನೆಲ್ಲಾ ಸಮರ್ಥನೆ ಮಾಡಿಕೊಳ್ಳುತ್ತೀರಿ? ಒಂದು ವೇಳೆ ತುರ್ತು ಪರಿಸ್ಥಿತಿಯಿದ್ದರೆ ಬೀದಿಳಿದು ಹೋರಾಟ ಮಾಡಿ ಎಂದು ಸವಾಲು ಹಾಕಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು