Webdunia - Bharat's app for daily news and videos

Install App

ಜಲ್ಲಿಕಟ್ಟು ತೀರ್ಪು ಮುಂದೂಡಲು ಸುಪ್ರೀಂ ಒಪ್ಪಿಗೆ; ಸುಗ್ರಿವಾಜ್ಞೆ ಹೊರಡಿಸಲು ಕೇಂದ್ರ ಚಿಂತನೆ

Webdunia
ಶುಕ್ರವಾರ, 20 ಜನವರಿ 2017 (11:43 IST)
ಜಲ್ಲಿಕಟ್ಟು ಕುರಿತಂತೆ ಅಂತಿಮ ತೀರ್ಪನ್ನು ಮುಂದೂಡಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. 

ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಅಂತಿಮ ತೀರ್ಪನ್ನು ಒಂದು ವಾರಗಳ ಕಾಲ ಮುಂದೂಡಿದೆ.
 
ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಇಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಪೀಠದ ಬಳಿ ಈ ಮನವಿಯನ್ನು ಇಟ್ಟಿದ್ದರು. 
 
ಈ ಹಿಂದೆ ಕೇಂದ್ರ ಈ ಎಂದೂ ಈ ರೀತಿಯ ಮನವಿಯನ್ನು ಸುಪ್ರೀಂ ಮುಂದಿಟ್ಟಿರಲಿಲ್ಲ. ಆದರೆ ಜಲ್ಲಿಕಟ್ಟು ನಿಷೇಧಕ್ಕೆ ಆಕ್ರೋಶಗೊಂಡಿರುವ ತಮಿಳುನಾಡಿಗರು ತಮ್ಮ ಸಾಂಪ್ರದಾಯಿಕ ಕ್ರೀಡೆಗೆ ತಡೆಯಾಗಲು ಕೇಂದ್ರವೇ ಕಾರಣ ಎಂದು ಕಿಡಿಕಾರುತ್ತಿದ್ದಾರೆ. ಅವರ ಆಕ್ರೋಶವೆಲ್ಲ ಕೇಂದ್ರದ ವಿರುದ್ಧವಿದೆ ಹೊರತು ರಾಜ್ಯ ಸರ್ಕಾರದ ವಿರುದ್ಧವಲ್ಲ. ಹೀಗಾಗಿ ಅವರನ್ನು  ತಣ್ಣಗಾಗಿಸಲು ಸುಗ್ರಿವಾಜ್ಞೆಯನ್ನು ಹೊರಡಿಸುವುದೊಂದೇ ಮಾರ್ಗ ಎಂಬುದನ್ನು ಅರಿತುಕೊಂಡಿರುವ ಕೇಂದ್ರ ಇದೇ ಕಾರಣಕ್ಕೆ ತೀರ್ಪನ್ನು ಒಂದು ವಾರ ಮುಂದೂಡಲು ಮನವಿ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. 
 
ಪೊಂಗಲ್ ಒಳಗೆ ತೀರ್ಪು ನೀಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಕೀಲರು ಸುಪ್ರೀಂ ವಕೀಲರ ಬಳಿ ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಆದರೆ ಮೊದಲೇ ಆದೇಶ ನೀಡಿ ಎಂದು ನಮ್ಮನ್ನು ಕೋರಿರುವುದು ಅಸಮಂಜಸ ಎಂದಿದ್ದ ಕೋರ್ಟ್ ಮನವಿಯನ್ನು ತಳ್ಳಿ ಹಾಕಿತ್ತು. ಮತ್ತೀಗ ಕೇಂದ್ರದ ಮನವಿಯನ್ನು ಸ್ವೀಕರಿಸಿ ತೀರ್ಪು ಮುಂದೂಡಲು ಒಪ್ಪಿಕೊಂಡಿದೆ. 
 
ತೀರ್ಪು ಮುಂದೂಡಿದರೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಿ ಜಲ್ಲಿಕಟ್ಟು ನಡೆಸಲು ಅನುವು ಮಾಡಿಕೊಡಬಹುದು. ಸುಪ್ರೀಂ ಇನ್ನು ತೀರ್ಪು ಕೂಡ ನೀಡಿಲ್ಲವಾದ್ದರಿಂದ ಈಗಲೇ ಸುಗ್ರಿವಾಜ್ಞೆ ಹೊರಡಿಸುವುದರಿಂದ ನ್ಯಾಯಾಂಗ ನಿಂದನೆ ಮಾಡಿದಂತಾಗುವುದಿಲ್ಲ. 
 
ಹೀಗಾಗಿ ಸುಗ್ರಿವಾಜ್ಞೆ ಹೊರಡಿಸುವುದರ ಕುರಿತಂತೆ ಕೇಂದ್ರ ತಮಿಳುನಾಡು ಸರ್ಕಾರದ ಜತೆ ಮಾತುಕತೆ ನಡೆಸುತ್ತಿದೆ. 
 
ಕೇಂದ್ರ ನಿನ್ನೆ ಕೈ ಚೆಲ್ಲಿದ್ದ ಹಿನ್ನೆಲೆಯಲ್ಲಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಕಾನೂನು ಸಲಹೆಯನ್ನು ಪಡೆದಿದ್ದ ತಮಿಳುನಾಡು ಸರ್ಕಾರ, ತಾನೇ ಸುಗ್ರಿವಾಜ್ಞೆ ಹೊರಡಿಸುವ ಚಿಂತನೆ ನಡೆಸಿತ್ತು ಮತ್ತು ಇದರ ಕರಡನ್ನು ಕೇಂದ್ರಕ್ಕೆ ಕಳುಹಿಸಿತ್ತು. ಇದರ ಮಧ್ಯೆ ಕೇಂದ್ರ ಕೂಡ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments