Webdunia - Bharat's app for daily news and videos

Install App

ಜಲ್ಲಿಕಟ್ಟು ಸ್ಪರ್ಧೆ : ಓರ್ವ ಸಾವು, ಆರು ಮಂದಿಗೆ ಗಂಭೀರ ಗಾಯ

Webdunia
ಗುರುವಾರ, 23 ಫೆಬ್ರವರಿ 2023 (13:26 IST)
ಆನೆಕಲ್ : ಜಲ್ಲಿಕಟ್ಟು ಆಚರಣೆ ವೇಳೆ ಓರ್ವ ಸಾವನ್ನಪ್ಪಿ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಕೆಲವರಪಲ್ಲಿ ಸಮೀಪದಲ್ಲಿ ಸಪ್ಲಮ್ಮ ದೇವಿ ಜಾತ್ರಾ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಗೂಳಿಯೊಂದು ಜನರ ಮೇಲೆ ದಾಳಿ ನಡೆಸಿ, ಸೂಳಗಿರಿ ಸಮೀಪದ ಆರೋಪಲ್ಲಿ ಗ್ರಾಮದ ಮಂಜು (25) ಸಾವನ್ನಪ್ಪಿದ್ದಾರೆ.

ಗೂಳಿ ದಾಳಿಯಿಂದಾಗಿ ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಪೊಂಗಲ್ ಹಬ್ಬದ ಬಳಿಕ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಏರ್ಪಡಿಸಲಾಗುತ್ತದೆ. ಈ ಸ್ಪರ್ಧೆಯನ್ನು ವೀಕ್ಷಿಸುವ ಸಲುವಾಗಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಜನರು ಆಗಮಿಸುತ್ತಾರೆ.

ಈ ಸ್ಪರ್ಧೆಗೆ ಜನರು ಹೊಸೂರು, ಡೆಂಕಣಿಕೋಟೆ, ಥಳಿ, ಬಾಗಲೂರು ಸೇರಿದಂತೆ ಹಲವು ಕಡೆಗಳಿಂದ ಸುಮಾರು 500ಕ್ಕೂ ಹೆಚ್ಚು ಹೋರಿಗಳನ್ನು ಕರೆತರುತ್ತಾರೆ.

ತಮಿಳುನಾಡು ಅಲ್ಲದೇ ಕರ್ನಾಟಕ, ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳಿಂದ ಗೂಳಿಗಳು ಆಗಮಿಸುತ್ತವೆ. ಕಾಲಿಗೆ ಗೆಜ್ಜೆ, ಕುತ್ತಿಗೆಗೆ ಗೆಜ್ಜೆಸರ, ಕೊಂಬಿಗೆ ಬಣ್ಣ ಬಣ್ಣದ ತಡಿಕೆಯಿಂದ ಸಿಂಗರಿಸುತ್ತಾರೆ.

ಸಿಂಗಾರದ ಜೊತೆಗೆ ನಶೆಯಲ್ಲಿ ಗೂಳಿಗಳು ಹದ್ದಿನಂತೆ ಮುನ್ನುಗುತ್ತವೆ. ಗೂಳಿಗಳ ಮುಡಿಗೆ ಕಟ್ಟುವ ಬಹುಮಾನಕ್ಕಾಗಿ ಅವುಗಳನ್ನು ಹಿಡಿಯಲು ಯುವಕರು ಹೋರಾಟವನ್ನು ನಡೆಸುತ್ತಾರೆ. ಈ ವೇಳೆ ಗೂಳಿಗಳು ದಾಳಿ ನಡೆಸಿ ಅನೇಕ ಸಾವು ನೋವುಗಳು ಸಂಭವಿಸುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments