Webdunia - Bharat's app for daily news and videos

Install App

ಜಲ್ಲಿಕಟ್ಟು : ಸುಗ್ರಿವಾಜ್ಞೆಗೆ ತಯಾರಿ ನಡೆಸಿದ ತಮಿಳುನಾಡು ಸರ್ಕಾರ

Webdunia
ಶುಕ್ರವಾರ, 20 ಜನವರಿ 2017 (11:03 IST)
ತಮಿಳುನಾಡಿನಲ್ಲಿ ಜಲ್ಲಿಕಟ್ಟು ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜನರನ್ನು ಶಾಂತಗೊಳಿಸಲು ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. 

ಜಲ್ಲಿಕಟ್ಟುದೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವೇ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತಹ ಕರಡನ್ನು ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ರವಾನಿಸಿದೆ. ಗೃಹ ಸಚಿವಾಲಯ ಇದಕ್ಕೆ ಅನುಮತಿ ನೀಡಿದರೆ ರಾಜ್ಯಪಾಲರ ಸಹಿ ಪಡೆಯುವುದೊಂದೇ ಬಾಕಿ ಇರುತ್ತದೆ. ಹೀಗಾಗಿ ಮತ್ತೆರಡು ದಿನಗಳಲ್ಲಿ  ನಿಮಗೆ ಸಿಹಿ ಸುದ್ದಿ ನೀಡಲಿದ್ದೇವೆ. ಪ್ರತಿಭಟನೆ ಹಿಂಪಡೆಯಿರಿ ಎಂದು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಮನವಿ ಮಾಡಿಕೊಂಡಿದ್ದಾರೆ. 
 
ನಿನ್ನೆ ಪ್ರಧಾನಿ ಮೋದಿಯನ್ನು ಭೇಟಿಯಾಗಿ ನಿರಾಸರಾಗಿ ಹಿಂತಿರುಗಿದ್ದ ಸೆಲ್ವಂ, ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರನ್ನು ಭೇಟಿ ಮಾಡಿ ಕಾನೂನು ಸಲಹೆ ಪಡೆದಿದ್ದರು. ಈ ಸಂದರ್ಭದಲ್ಲಿ ರೋಹ್ಟಗಿ ಸಂಪ್ರದಾಯ- ಸಂಸ್ಕೃತಿ ರಕ್ಷಣೆ ಉದ್ದೇಶದಿಂದ ರಾಜ್ಯ ಸರ್ಕಾರ ಕಾನೂನು ರೂಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದ್ದರು. 
 
ಮತ್ತೀಗ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡಿರುವ ಸಿಎಂ ಸೆಲ್ವಂ, ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತಯಾರಿಸಿ ಗೃಹಖಾತೆಗೆ ಅದರ ಕರಡನ್ನು ಕಳುಹಿಸಲಾಗಿದೆ. ಒಂದೆರಡು ದಿನಗಳಲ್ಲಿ ಜಲ್ಲಿಕಟ್ಟಿಗೆ ಅನುಮತಿ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.
 
ಜಲ್ಲಿಕಟ್ಟು ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿ ಇಂದು ತಮಿಳುನಾಡು ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ಮರೀನಾ ಸಮುದ್ರತೀರದಲ್ಲಿ ಸೇರಿರುವ ಲಕ್ಷಾಂತರ ಜನರು ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರೆಸಿದ್ದಾರೆ. 
 
ಚಿತ್ರೋದ್ಯಮದ ಸೇರಿದಂತೆ ಎಲ್ಲ ರಂಗದವರು ಪ್ರತಿಭಟನೆಗೆ ಬೆಂಬಲ ವ್ಯಕ್ತ ಪಡಿಸಿದ್ದು, ಇಂದು ಶೂಟಿಂಗ್ ಸೇರಿದಂತೆ ಚಿತ್ರೋದ್ಯಮ ಸಂಪೂರ್ಣ ಬಂದ್ ಆಗಿದೆ.

ವಿರೋಧ ಪಕ್ಷದ ನಾಯಕ ಸ್ಟಾಲಿನ್ ನೇತೃತ್ವದಲ್ಲಿ ರೈಲ್ ರೋಖೋ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕಲಾಗುತ್ತಿದೆ. ಮಾಂಬಲಮ್ ರೈಲು ನಿಲ್ದಾಣದಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

DGP Om Prakash Rao: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ಮೇಲೆ ಅನುಮಾನ ಬಂದಿದ್ದು ಈ ಮೂರು ಕಾರಣಕ್ಕೆ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ಮುಂದಿನ ಸುದ್ದಿ
Show comments