ಸ್ವಾತಂತ್ರದ ನಂತರ ಬಿಜೆಪಿ ತುಂಬಾ ಅಡೆತಡೆಗಳನ್ನು ಎದುರಿಸಬೇಕಾಗಿತ್ತು ಎನ್ನುವ ಪ್ರಧಾನಿ ಹೇಳಿಕೆಗೆ ತಿರುಗೇಟು ನೀಡಿದ ಕಾಂಗ್ರೆಸ್, ಆಂಗ್ಲರೊಂದಿಗೆ ಜನಸಂಘ್ ಮತ್ತು ಆರೆಸ್ಸೆಸ್ ಕೈಜೋಡಿಸಿದ್ದವು ಎಂದು ಗಂಬೀರ ಆರೋಪ ಮಾಡಿದೆ.
ಬ್ರಿಟಿಷರ ಅಡಳಿತದಲ್ಲಿ ಕಾಂಗ್ರೆಸ್ ಪಕ್ಷಕ್ಕಿಂತ ಬಿಜೆಪಿ ತುಂಬಾ ಬಿಕ್ಕಟ್ಟುಗಳನ್ನು ಎದುರಿಸಬೇಕಾಗಿ ಬಂದಿತ್ತು ಎನ್ನುವ ನಾಚಿಕೇಗೇಡಿನ ಹೇಳಿಕೆಯನ್ನು ಪ್ರಧಾನಿ ಮೋದಿ ಹಿಂಪಡೆದರೆ ಸಾಲದು. ತಮ್ಮ ಹೇಳಿಕೆಗಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ವಕ್ತಾರ ಆನಂದ್ ಶರ್ಮಾ ಮಾತನಾಡಿ, ಜನಸಂಘ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ, ಸಂಘ ಪರಿವಾರ ಮತ್ತು ವೀರ್ ಸಾವರ್ಕರ್ ಬ್ರಿಟಿಷರೊಂದಿಗೆ ಕೈಜೋಡಿಸಿರುವುದನ್ನು ಇತಿಹಾಸ ಮರೆತಿಲ್ಲ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜನಸಂಘ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅಂದಿನ ಬಂಗಾಳದ ರಾಜ್ಯಪಾಲರಿಗೆ ಕ್ವಿಟ್ ಇಂಡಿಯಾ ಚಳುವಳಿ ಹೇಗೆ ನಿಯಂತ್ರಿಸಬೇಕು ಎನ್ನುವ ಬಗ್ಗೆ ಪತ್ರ ಬರೆದಿರುವುದು ಇತಿಹಾಸದಲ್ಲಿದೆ ಎನ್ನುವುದನ್ನು ಪ್ರಧಾನಿ ಮೋದಿ ಮರೆಯಬಾರದು ಎಂದು ವ್ಯಂಗ್ಯವಾಡಿದರು.
ಪ್ರಧಾನಿ ಮೋದಿ ಹೇಳಿಕೆ ಸುಳ್ಳಿನ ಕಂತೆಯಾಗಿದ್ದು, ಅವರ ಹೇಳಿಕೆಯಿಂದ ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ವಲ್ಲಭಭಾಯಿ ಪಟೇಲ್ ಮತ್ತು ತ್ಯಾಗ ಬಲಿದಾನ ನೀಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅಪಮಾನವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ