Webdunia - Bharat's app for daily news and videos

Install App

ಜಯಾಗೆ ಜೈಲು ಶಿಕ್ಷೆ: 16 ಅಭಿಮಾನಿಗಳು ಆತ್ಮಹತ್ಯೆ, ಹೃದಯಾಘಾತಕ್ಕೆ ಬಲಿ

Webdunia
ಸೋಮವಾರ, 29 ಸೆಪ್ಟಂಬರ್ 2014 (11:35 IST)
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಅವರ ನೆಚ್ಚಿನ ಅಭಿಮಾನಿಗಳಿಗೆ ತೀವ್ರ ಆಘಾತಕರ ಸುದ್ದಿಯಾಗಿ ಪರಿಣಮಿಸಿದೆ. ಜಯಾಗೆ ಶಿಕ್ಷೆ ವಿಧಿಸಿದ ಬಳಿಕ ಕನಿಷ್ಠ 16 ಜನರು ಆತ್ಮಹತ್ಯೆ ಮತ್ತು ಹೃದಯಾಘಾತಕ್ಕೆ ಗುರಿಯಾಗಿ ಸತ್ತಿದ್ದಾರೆ.
 
ಇಬ್ಬರನ್ನು ತೀವ್ರ ಸುಟ್ಟಗಾಯಗಳಿಂದ ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ಅಭಿಮಾನಿಗಳು ನೇಣು ಹಾಕಿಕೊಂಡು ಸತ್ತಿದ್ದರೆ, ಒಬ್ಬ ಎಐಎಡಿಎಂಕೆ ಬೆಂಬಲಿಗ ಬೆಂಕಿ ಹಚ್ಚಿಕೊಂಡು ಆತ್ಮಾಹುತಿ ಮಾಡಿಕೊಂಡಿದ್ದಾನೆ.  ಇನ್ನೊಬ್ಬ ವ್ಯಕ್ತಿ ಚಲಿಸುತ್ತಿರುವ ಬಸ್ಸಿನ ಎದುರು ಹಾರಿ ಸತ್ತಿದ್ದಾನೆ. ಇನ್ನೊಬ್ಬ ವ್ಯಕ್ತಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
10 ಜನರು ಜಯಾಗೆ ಜೈಲು ಶಿಕ್ಷೆಯಿಂದ ತೀವ್ರ ಆಘಾತಗೊಂಡು ಹೃದಯಾಘಾತದಿಂದ ಸತ್ತಿದ್ದಾರೆ.
 
12ನೇ ತರಗತಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಾಹುತಿಗೆ ಯತ್ನಿಸಿದ್ದು ತೀವ್ರ ಸುಟ್ಟಗಾಯಗಳಿಂದ ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೊಬ್ಬ ಅಭಿಮಾನಿ ತಿರುಪುರದಲ್ಲಿ ತನ್ನ ಕಿರುಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಇಂತಹ ಪರಮಾವಧಿಯ ಪ್ರತಿಕ್ರಿಯೆಗಳು ಜಯಾ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದು, ಇಂತಹ ಕ್ರಮಕ್ಕೆ ಮುಂದಾಗದಂತೆ ಕರೆ ನೀಡಿದ್ದಾರೆ.

ಜಯಲಲಿತಾ ಜೊತೆ ಜನರ ಜೊತೆ ಸಂಬಂಧ ಇದನ್ನು ತೋರಿಸುತ್ತದೆ. ರಾಜ್ಯದಲ್ಲಿ ಪ್ರತಿಯೊಬ್ಬರೂ ಅಮ್ಮಾರನ್ನು ತಾಯಿಯಂತೆ ಭಾವಿಸಿದ್ದರು ಎಂದು ಮಹಿಳಾ ವಿಭಾಗದ ಸರಸ್ವತಿ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments