Webdunia - Bharat's app for daily news and videos

Install App

ಕೊನೆಗೂ ಬಹಿರಂಗವಾಯ್ತು ಜಯಲಲಿತಾ ಸಾವಿನ ರಹಸ್ಯ !

Webdunia
ಸೋಮವಾರ, 6 ಫೆಬ್ರವರಿ 2017 (15:05 IST)
ತಮಿಳುನಾಡು ಮಾಜಿ ಮುಖ್ಯಮಂತ್ರಿ, ಎಐಡಿಎಂಕೆ ನಾಯಕಿ, ರಾಜ್ಯದ ಜನರ ಪಾಲಿನ 'ಅಮ್ಮ 'ಜಯಲಲಿತಾ ಸಾವಿನ ಕುರಿತು ಹಬ್ಬಿರುವ ವದಂತಿಗಳಿಗೆ ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಇಂದು ತೆರೆ ಎಳೆದಿದ್ದು ಸಾವಿಗೂ ಮುನ್ನ ಜಯಾ ರಕ್ತ ಸಂಪೂರ್ಣ ಕೆಟ್ಟಿತ್ತು ಎಂಬ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. 
ಇಂದು ಚೆನ್ನೈಗೆ ಆಗಮಿಸಿ ಪತ್ರಿಕಾಗೋಷ್ಠಿ ನಡೆಸಿರುವ ರಿಚರ್ಡ್ ಬೆಲ್, ಜಯಾ ಅವರಿಗೆ ತೀವ್ರ ತರಹದ ಸಕ್ಕರೆ ಕಾಯಿಲೆ ಇತ್ತು. ಹೀಗಾಗಿ ನಾವು ನೀಡಿದ ಚಿಕಿತ್ಸೆಗೆ ಅವರ ದೇಹ ಸ್ಪಂದಿಸುತ್ತಿರಲಿಲ್ಲ. ನಾವು ಅತ್ಯುತ್ತಮವಾದ ಚಿಕಿತ್ಸೆಯನ್ನೇ ನೀಡಿದ್ದೆವು. ಆದರೆ ಅವರ ಆರೋಗ್ಯ ಸುಧಾರಣೆ ಕ್ಲಿಷ್ಟಕರವಾಗಿತ್ತು. ಸಕ್ಕರೆ ಕಾಯಿಲೆಯೇ ಅವರಿಗೆ ಮುಳುವಾಯಿತು, ಎಂದಿದ್ದಾರೆ. 
 
ಮುಂದುವರೆದ ಅವರು ತೀವ್ರ ನಿಗಾ ಘಟಕದಲ್ಲಿದ್ದಾಗ ಜಯಾ ಎಚ್ಚರವಾಗಿದ್ದರು. ವೆಂಟಿಲೇಟರ್‌ನಲ್ಲಿಟ್ಟಾಗ ಮಾತ್ರ ಅವರು ಪ್ರಜ್ಞಾಹೀನರಾಗಿದ್ದರು. ಸಾವಿಗೂ ಮುನ್ನ ಜಯಾ ರಕ್ತ ಸಂಪೂರ್ಣ ಕೆಟ್ಟಿತ್ತು. ದೇಹದಲ್ಲಿ ಸೋಂಕು ಹೆಚ್ಚಿದ್ದರಿಂದ ರಕ್ತದಲ್ಲಿ ವಿಷಕಾರಿ ಅಂಶ ಹೆಚ್ಚಾಗುತ್ತಲೇ ಇತ್ತು. ಹೀಗಾಗಿ ಆಗಾಗ ಅಂಗವೈಫಲ್ಯವಾಗುತ್ತಿತ್ತು. ಹೀಗಾಗಿ ಎಷ್ಟೇ ಉತ್ತಮವಾದ ಚಿಕಿತ್ಸೆಯನ್ನು ನೀಡಿದರೂ ಪ್ರಯೋಜನವಾಗಲಿಲ್ಲ ಎಂದು ಅವರು ಜಯಾ ಸಾವಿನ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ. 
 
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ನಿರ್ಜಲೀಕರಣ ಮತ್ತು ಜ್ವರದಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಜಯಲಲಿತಾ 75 ದಿನಗಳ ಜೀವನ್ಮರಣ ಹೋರಾಟ ನಡೆಸಿದ್ದರು. ಅವರನ್ನು ಉಳಿಸಿಕೊಳ್ಳಲು ದೇಶವಿದೇಶಗಳ ತಜ್ಞ ವೈದ್ಯರು ನಡೆಸಿದ ಪ್ರಯತ್ನ ವ್ಯರ್ಥವಾಗಿ  ಡಿಸೆಂಬರ್ 5 ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಅವರ ಸಾವಿನ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುತ್ತಿದ್ದು, ವಿವಾದ ಸುಪ್ರೀಂ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಬಹಳ ತಡವಾಗಿಯಾದರೂ ಅಪೋಲೋ ಆಸ್ಪತ್ರೆ ಈ ಕುರಿತು ಸ್ಪಷ್ಟನೆ ನೀಡುವ ಪ್ರಯತ್ನವನ್ನು ಮಾಡಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments