Webdunia - Bharat's app for daily news and videos

Install App

ಪಕ್ಷ ಉಳಿಸುವ ಜವಾಬ್ಧಾರಿ ಅಮ್ಮ ಜಯಲಲಿತಾ ನನಗೆ ವಹಿಸಿದ್ದಾರೆ: ಶಶಿಕಲಾ ನಟರಾಜನ್

Webdunia
ಭಾನುವಾರ, 12 ಫೆಬ್ರವರಿ 2017 (08:45 IST)
ಚೆನ್ನೈ: ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲರು ಇನ್ನೂ ಅವಕಾಶ ನೀಡದೇ ಇರುವುದು ಶಶಿಕಲಾ ನಟರಾಜನ್ ಅವರನ್ನು ಕೆರಳಿಸಿದೆ. ಹೀಗಾಗಿ ನಮ್ಮ ತಾಳ್ಮೆಗೂ ಮಿತಿಯಿದೆ. ಮಿತಿ ಮೀರಿದರೆ ಮುಂದೇನು ಮಾಡಬೇಕೋ ಅದನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

 
ನಮಗೆ ಬಹುಮತವಿದೆ. ಹೀಗಾಗಿ ಸರ್ಕಾರ ರಚಿಸಲು ಅವಕಾಶ ನೀಡಬೇಕು. ಕೆಲವರು ಎಐಎಡಿಎಂಕೆಯ ಒಗ್ಗಟ್ಟು ಮುರಿಯುವುದಕ್ಕಾಗಿ ಇಷ್ಟೆಲ್ಲಾ ಮಾಡುತ್ತಿದ್ದಾರೆ ಅದಕ್ಕೆಲ್ಲಾ ಅವಕಾಶ ನೀಡಲ್ಲ ಎಂದು ಚಿನ್ನಮ್ಮ ಗುಡುಗಿದ್ದಾರೆ.

ಒಬ್ಬೊಬ್ಬರೇ ಶಾಸಕರು ಪನ್ನೀರ್ ಸೆಲ್ವಂ ಕಡೆಗೆ ವಾಲುತ್ತಿರುವ ಹಿನ್ನಲೆಯಲ್ಲಿ ತಮ್ಮ ಬೆಂಬಲಿಗ ಶಾಸಕರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಶಶಿಕಲಾ “ಅಮ್ಮ ಜಯಲಲಿತಾ ಪಕ್ಷವನ್ನು ಕಟ್ಟಿದರು. ಅವರ ಕನಸಿನಂತೆ ಈ ಪಕ್ಷವನ್ನು ಮುನ್ನಡೆಸುವ ಜವಾಬ್ಧಾರಿಯನ್ನು ನನಗೆ ಬಿಟ್ಟು ಹೋಗಿದ್ದಾರೆ. ನನಗೆ 1.5 ಕೋಟಿ ಜನರ ಬೆಂಬಲವಿದೆ. ಜನ ಬೆಂಬಲ ಮುಂದೆ ಯಾರೂ ನನಗೆ ಏನೂ ಮಾಡಲಾಗದು” ಎಂದು ಗುಡುಗಿದ್ದಾರೆ.

ಶಶಿಕಲಾ ಮತ್ತು ಪನ್ನೀರ್ ಸೆಲ್ವಂ ನಡುವಿನ ಪದವಿ ಫೈಟ್ ತಾರಕಕ್ಕೇರಿದ್ದು, ಚಿನ್ನಮ್ಮ ತಮ್ಮ ಬೆಂಬಲಿಗರ ಸಂಖ್ಯೆ ಕಡಿಮೆಯಾಗುವ ಮೊದಲೇ ಖಂಡಿತಾ ಮುಂದಿನ ಹೆಜ್ಜೆ ಕೈಗೊಳ್ಳುವ ನಿರೀಕ್ಷೆಯಿದೆ. ಹೀಗಾಗಿ ಇಂದಿನ ದಿನ ಮಹತ್ವದ್ದಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments