Webdunia - Bharat's app for daily news and videos

Install App

ಪಕ್ಷ ಉಳಿಸುವ ಜವಾಬ್ಧಾರಿ ಅಮ್ಮ ಜಯಲಲಿತಾ ನನಗೆ ವಹಿಸಿದ್ದಾರೆ: ಶಶಿಕಲಾ ನಟರಾಜನ್

Webdunia
ಭಾನುವಾರ, 12 ಫೆಬ್ರವರಿ 2017 (08:45 IST)
ಚೆನ್ನೈ: ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲರು ಇನ್ನೂ ಅವಕಾಶ ನೀಡದೇ ಇರುವುದು ಶಶಿಕಲಾ ನಟರಾಜನ್ ಅವರನ್ನು ಕೆರಳಿಸಿದೆ. ಹೀಗಾಗಿ ನಮ್ಮ ತಾಳ್ಮೆಗೂ ಮಿತಿಯಿದೆ. ಮಿತಿ ಮೀರಿದರೆ ಮುಂದೇನು ಮಾಡಬೇಕೋ ಅದನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

 
ನಮಗೆ ಬಹುಮತವಿದೆ. ಹೀಗಾಗಿ ಸರ್ಕಾರ ರಚಿಸಲು ಅವಕಾಶ ನೀಡಬೇಕು. ಕೆಲವರು ಎಐಎಡಿಎಂಕೆಯ ಒಗ್ಗಟ್ಟು ಮುರಿಯುವುದಕ್ಕಾಗಿ ಇಷ್ಟೆಲ್ಲಾ ಮಾಡುತ್ತಿದ್ದಾರೆ ಅದಕ್ಕೆಲ್ಲಾ ಅವಕಾಶ ನೀಡಲ್ಲ ಎಂದು ಚಿನ್ನಮ್ಮ ಗುಡುಗಿದ್ದಾರೆ.

ಒಬ್ಬೊಬ್ಬರೇ ಶಾಸಕರು ಪನ್ನೀರ್ ಸೆಲ್ವಂ ಕಡೆಗೆ ವಾಲುತ್ತಿರುವ ಹಿನ್ನಲೆಯಲ್ಲಿ ತಮ್ಮ ಬೆಂಬಲಿಗ ಶಾಸಕರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಶಶಿಕಲಾ “ಅಮ್ಮ ಜಯಲಲಿತಾ ಪಕ್ಷವನ್ನು ಕಟ್ಟಿದರು. ಅವರ ಕನಸಿನಂತೆ ಈ ಪಕ್ಷವನ್ನು ಮುನ್ನಡೆಸುವ ಜವಾಬ್ಧಾರಿಯನ್ನು ನನಗೆ ಬಿಟ್ಟು ಹೋಗಿದ್ದಾರೆ. ನನಗೆ 1.5 ಕೋಟಿ ಜನರ ಬೆಂಬಲವಿದೆ. ಜನ ಬೆಂಬಲ ಮುಂದೆ ಯಾರೂ ನನಗೆ ಏನೂ ಮಾಡಲಾಗದು” ಎಂದು ಗುಡುಗಿದ್ದಾರೆ.

ಶಶಿಕಲಾ ಮತ್ತು ಪನ್ನೀರ್ ಸೆಲ್ವಂ ನಡುವಿನ ಪದವಿ ಫೈಟ್ ತಾರಕಕ್ಕೇರಿದ್ದು, ಚಿನ್ನಮ್ಮ ತಮ್ಮ ಬೆಂಬಲಿಗರ ಸಂಖ್ಯೆ ಕಡಿಮೆಯಾಗುವ ಮೊದಲೇ ಖಂಡಿತಾ ಮುಂದಿನ ಹೆಜ್ಜೆ ಕೈಗೊಳ್ಳುವ ನಿರೀಕ್ಷೆಯಿದೆ. ಹೀಗಾಗಿ ಇಂದಿನ ದಿನ ಮಹತ್ವದ್ದಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments