Webdunia - Bharat's app for daily news and videos

Install App

ಜಯಲಲಿತಾ ಸೋದರಸೊಸೆಯಿಂದ ಎಂಜಿಆರ್-ಅಮ್ಮಾ-ದೀಪಾ ಫೋರಂ ಹೊಸ ಪಕ್ಷ ಘೋಷಣೆ

Webdunia
ಶುಕ್ರವಾರ, 24 ಫೆಬ್ರವರಿ 2017 (18:35 IST)
ತಮಿಳುನಾಡಿನ ರಾಜಕೀಯದಲ್ಲಿ ಇಂದು ಹೊಸ ಪರ್ವ ಆರಂಭವಾಗಿದೆ. ಈ ಹಿಂದೆ ಘೋಷಿಸಿದಂತೆ  ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಇಂದು ಎಂಜಿಆರ್-ಅಮ್ಮಾ-ದೀಪಾ ಫೋರಂ ಎನ್ನುವ ಹೊಸ ಪಕ್ಷಕ್ಕೆ ಚಾಲನೆ ನೀಡಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ದಿವಂಗತ ಜಯಲಲಿತಾ ನಿಧನದಿಂದ ತೆರವಾದ ಆರ್‌.ಕೆ.ನಗರ ಕ್ಷೇತ್ರದಿಂದ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
 
ಮುಂಬರುವ ದಿನಗಳಲ್ಲಿ ಅಮ್ಮಾ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಅಮ್ಮನಿಗಾಗಿ ತಮಿಳುನಾಡಿನಲ್ಲಿ ಸೇವೆ ಸಲ್ಲಿಸಲು ಸಿದ್ದಳಿದ್ದೇನೆ ಎಂದು ಘೋಷಿಸಿದ್ದಾರೆ.
 
ಎಂಜಿಆರ್-ಅಮ್ಮಾ-ದೀಪಾ ಫೋರಂ ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಹೊಸ ಪಕ್ಷ ಕಟ್ಟುವಲ್ಲಿ ಸಹೋದರ ದೀಪಕ್ ಕೂಡಾ ನೆರವಾಗುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು..
 
ಜಯಾ ಜನ್ಮದಿನದಂದು ತಾವು ಹೊಸ ಪಕ್ಷವನ್ನು ಘೋಷಿಸುವುದಾಗಿ ಹೇಳಿದ್ದ ದೀಪಾ ತಮ್ಮ ನಿವಾಸದಲ್ಲಿ ಪಕ್ಷದ ಕಚೇರಿಯನ್ನು ಆರಂಭಿಸಿದ್ದು ಪಕ್ಷದ ಹೆಸರು ಮತ್ತು ಧ್ವಜವನ್ನು ಬಹಿರಂಗಪಡಿಸಿದ್ದಾರೆ. 
 
ಜಯಾ ನಿಧನರಾಗುತ್ತಿದ್ದಂತೆ ರಾಜಕೀಯ ಪ್ರವೇಶಿಸಲು ಸಿದ್ಧರಾದ ಜಯಲಲಿತಾ ಸೋದರನ ಮಗಳು ದೀಪಾ ಜಯಕುಮಾರ್ ಚೆನ್ನೈನ ಮರೀನಾ ಬೀಚ್ ನಲ್ಲಿ ಜನವರಿ 17ರಂದು ನಡೆದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರ 100ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ರಾಜಕೀಯ ಪ್ರವೇಶ ಮಾಡುತ್ತಿರುವುದಾಗಿ ಘೋಷಿಸಿದ್ದರು.
 
ನನ್ನ ಮುಂದೆ ಎರಡು ಆಯ್ಕೆಗಳಿವೆ ಎಐಎಡಿಎಂಕೆ ಸೇರುವುದು ಅಥವಾ ಹೊಸ ಪಕ್ಷ ಕಟ್ಟುವುದು. ನಾನು ಈ ಬಗ್ಗೆ ನನ್ನ ಬೆಂಬಲಿಗರ ಜತೆ ಚರ್ಚೆ ಮಾಡಿ ನಿರ್ಧಾ ಕೈಗೊಳ್ಳುತ್ತೇನೆ. ಅಮ್ಮ ಜಯಲಲಿತಾ ಅವರ ಹುಟ್ಟುಹಬ್ಬದ ದಿನ(ಫೆ.24)ದಂದು ಈ ಬಗ್ಗೆ ನಿರ್ಣಯ ಪ್ರಕಟಿಸುತ್ತೇನೆ ಎಂದು ದೀಪಾ ಹೇಳಿದ್ದರು.
 
ಜಯಲಲಿತಾರನ್ನೇ ಹೋಲುವ 42 ವರ್ಷದ ದೀಪಾ ಸೋದರತ್ತೆ ಜಯಲಲಿತಾರನ್ನೇ ಹೋಲುವ 42 ವರ್ಷದ ದೀಪಾರ ಅವರಲ್ಲಿ ನಾವು ಕಳೆದುಕೊಂಡ ಅಮ್ಮನನ್ನು ಕಾಣುತ್ತೇವೆ ಎಂದು ಅಭಿಮಾನಿಗಳು ಹೇಳುತ್ತಿರುವುದು ದೀಪಾ ರಾಜಕೀಯ ಮಹಾತ್ವಾಕಾಂಕ್ಷೆಗೆ ಇಂಬು ನೀಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments