ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಆರೋಗ್ಯದಲ್ಲಿ ಗಣನೀಯ ಪ್ರಗತಿ ಕಂಡು ಬಂದಿದ್ದು ಅವರು ಸಹಜ ಜೀವನ ಜೀವನ ನಡೆಸಲು ಪ್ರಾರಂಭಿಸಿದ್ದಾರೆ ಎಂದು ಎಂದು ಅವರು ಪ್ರತಿನಿಧಿಸುವ ಪಕ್ಷ ಎಐಡಿಎಂಕೆ ಪ್ರಕಟನೆಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 22 ರಿಂದ ಆಸ್ಪತ್ರೆ ಸೇರಿರುವ ಜಯಲಲಿತಾ (68) ಅವರಿಗಾಗಿ ಜನರು ಸಲ್ಲಿಸಿದ್ದ ಪ್ರಾರ್ಥನೆ ಸಫಲವಾಗಿದೆ. ಶೀಘ್ರದಲ್ಲಿಯೇ ಬಡವರ ಸೇವೆಗಾಗಿ ಮರಳಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಪಕ್ಷದ ವಕ್ತಾರ ಪರ್ನುಟ್ಟಿ ಎಸ್ ರಾಮಚಂದ್ರನ್ ಹೇಳಿದ್ದಾರೆ.
ಜಯಲಲಿತಾ ಆರೋಗ್ಯವಾಗಿದ್ದಾರೆ, ಆದರೆ ಕೆಲ ದಿನ ಅವರನ್ನು ನಿಗಾವಣೆಯಲ್ಲಿ ಇಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪಕ್ಷದ ಮತ್ತೊಬ್ಬ ವಕ್ತಾರೆ ಸಿ.ಆರ್ ಸರಸ್ವತಿ ಹೇಳಿದ್ದಾರೆ.
ಅವರು ಆರೋಗ್ಯವಾಗಿದ್ದು ಸಹಜ ಆಹಾರವನ್ನು ಸೇವಿಸುತ್ತಿದ್ದಾರೆ. ಸಹಜ ಜೀವನವನ್ನು ನಡೆಸಲು ಪ್ರಾರಂಭಿಸಿರುವ ಅವರು ಆದಷ್ಟು ಬೇಗ ಸಾರ್ವಜನಿಕ ಜೀವನಕ್ಕೆ ಮರಳಲಿದ್ದಾರೆ ಎಂದು ಸರಸ್ವತಿ ಹೇಳಿದ್ದಾರೆ.
ಜ್ವರ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಸೆಪ್ಟೆಂಬರ್ ತಿಂಗಳಲ್ಲಿ ಜಯಾ ಅಪೋಲೋ ಆಸ್ಪತ್ರೆ ಸೇರಿದ್ದರು. ಬಳಿಕ ಅವರ ಶ್ವಾಸಕೋಶದ ಸೋಂಕಿಗಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಆದರೆ ಅವರ ಆರೋಗ್ಯದ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಹೊರ ಹಾಕಿರಲಿಲ್ಲ.
ದೆಹಲಿಯ ಏಮ್ಸ್ ಮತ್ತು ಲಂಡನ್ನ ನುರಿತ ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ