Webdunia - Bharat's app for daily news and videos

Install App

ಜಯಾಗೆ ಹೃದಯಾಘಾತ: ಖಾಸಗಿ ಶಾಲಾಕಾಲೇಜುಗಳಿಗೆ ರಜೆ

Webdunia
ಸೋಮವಾರ, 5 ಡಿಸೆಂಬರ್ 2016 (10:15 IST)
ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಸರ್ಕಾರಿ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. 
 
ಅನಾರೋಗ್ಯದಿಂದಾಗಿ ಕಳೆದ ಸಪ್ಟೆಂಬರ್ ತಿಂಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರಿಗೆ ಭಾನುವಾರ ಸಂಜೆ ಹೃದಯಾಘಾತವಾಗಿತ್ತು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು ಇಂದು ಮುಂಜಾನೆ ಆ್ಯಂಜಿಯೋಗ್ರಾಮ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಇಂದು ಮುಂಜಾನೆ 10 ಗಂಟೆಗೆ ದೆಹಲಿಯಿಂದ ಏಮ್ಸ್ ವೈದ್ಯರ ತಂಡ ಜಯಾ ಚಿಕಿತ್ಸೆಗಾಗಿ ಆಗಮಿಸಲಿದೆ.
 
ಹೀಗಾಗಿ ಸಂಪೂರ್ಣ ತಮಿಳುನಾಡು ಆತಂಕಕ್ಕೊಳಗಾಗಿದೆ. ತಮ್ಮ ನೆಚ್ಚಿನ ನಾಯಕಿಯ ಆರೋಗ್ಯ ಸುಧಾರಣೆಗಾಗಿ ರಾಜ್ಯಾದ್ಯಂತ  ಅಭಿಮಾನಿಗಳು ಪೂಜೆ ಪುನಸ್ಕಾರಗಳನ್ನು ನಡೆಸುತ್ತಿದ್ದಾರೆ. 
 
ಜಯಲಲಿತಾ ಅವರಿಗೆ ಹೃದಯಾಘಾತವಾದ ಸುದ್ದಿ ಕೇಳಿ ಶಾಕ್ ಆದ ಅವರ ಪಕ್ಷದ ಕಾರ್ಯಕರ್ತರೊಬ್ಬರು ಹೃದಯಾಘಾತದಿಂದ ದುರ್ಮರವನ್ನಪ್ಪಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments