Webdunia - Bharat's app for daily news and videos

Install App

ಜೆಡಿಯು, ಕಾಂಗ್ರೆಸ್ ಮತ್ತು ಆರ್‌ಜೆಡಿ ಸೇರಿ ಬಿಜೆಪಿಯನ್ನು ಸೋಲಿಸಲಿವೆ: ನಿತೀಶ್

Webdunia
ಬುಧವಾರ, 30 ಜುಲೈ 2014 (15:22 IST)
ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಗುರಿ ಇಟ್ಟುಕೊಂಡಿರುವ ತಮ್ಮ ಪಕ್ಷ 10 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಜತೆ ಸೇರಿ  ಕಣಕ್ಕಿಳಿಯಲಿದೆ ಎಂದು ಜೆಡಿಯು ವರಿಷ್ಠ ಮತ್ತು  ಬಿಹಾರ್ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. 

10 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ  ಜತೆ ಸೇರಿ ಕಣಕ್ಕಿಳಿಯಲು "ಜೆಡಿ (ಯು)  ರಾಜ್ಯ ಕಾರ್ಯನಿರ್ವಾಹಕ ಘಟಕ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ. 
 
ಆಗಸ್ಟ್‌ನಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ಮಣ್ಣು ಮುಕ್ಕಿಸುವ ಉದ್ದೇಶದೊಂದಿಗೆ ನಾವೆಲ್ಲರೂ ಒಗ್ಗಟ್ಟಾಗುವ ಕುರಿತು  ಕಾಂಗ್ರೆಸ್ ಮತ್ತು ಆರ್‌ಜೆಡಿ ಜತೆ ಪಕ್ಷದ ರಾಜ್ಯ ಅಧ್ಯಕ್ಷ ಬಸಿಸ್ತಾ ನಾರಾಯಣ್ ಸಿಂಗ್  ಮಾತುಕತೆ ನಡೆಸಿದ್ದಾರೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
 
ಈ ಕುರಿತು ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಜತೆ ನಾನಿನ್ನೂ ಮಾತನಾಡಬೇಕಿದೆ ಎಂದು ನಿತೀಶ್ ತಿಳಿಸಿದ್ದಾರೆ. 
 
ಈ ಕುರಿತು ಪಕ್ಷದ ಪತ್ರಕರ್ತರೊಂದಿಗೆ ಮಾತನಾಡಿರುವ ಪಕ್ಷದ ರಾಜ್ಯಾಧ್ಯಕ್ಷ ಬಸಿಸ್ತಾ ನಾರಾಯಣ್ ಸಿಂಗ್ ಕಾಂಗ್ರೆಸ್ ಮತ್ತು ಆರ್‌ಜೆಡಿ ಜತೆ ಸೇರಿ ಚುನಾವಣೆಗಿಳಿಯುವ ತನ್ನ ಪಕ್ಷದ ನಿರ್ಧಾರವನ್ನು ಖಚಿತಪಡಿಸಿದ್ದಾರೆ. 
 
ಆದರೆ 3 ಪಕ್ಷದೊಳಗೆ ಇನ್ನೂ ಸೀಟು ಹಂಚಿಕೆಯ ಮಾತು ನಡೆದಿಲ್ಲ ಇಂದು ರಾತ್ರಿ ದೆಹಲಿಗೆ ಹೋಗುತ್ತಿರುವ ನಾನು ಈ ಕುರಿತು ಮಿತ್ರಪಕ್ಷಗಳ ನಾಯಕರ ಜತೆ ಮಾತುಕತೆ ನಡೆಸಲಿದ್ದೇನೆ ಎಂದು ಸಿಂಗ್ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments