Webdunia - Bharat's app for daily news and videos

Install App

ವಿದ್ಯಾರ್ಥಿನಿಯರಿಂದಲೇ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ಚಿತ್ರಣ

Webdunia
ಬುಧವಾರ, 9 ಆಗಸ್ಟ್ 2017 (14:09 IST)
ಆಘಾತಕಾರಿ ಘಟನೆಯೊಂದರಲ್ಲಿ, ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿ ಮೊಬೈಲ್ ಕಳ್ಳತನ ಮಾಡಿದ್ದಾಳೆ ಎಂದು ಆರೋಪಿಸಿದ ಇತರ ವಿದ್ಯಾರ್ಥಿನಿಯರು ಆಕೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದಲ್ಲದೇ ಸಂಪೂರ್ಣ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಹೇಯ ಕೃತ್ಯ ಎಸಗಿದ್ದಾರೆ. 

ಮಾಧ್ಯಮ ವರದಿಗಳ ಪ್ರಕಾರ, ವಿದ್ಯಾರ್ಥಿನಿಯರು ತಾವು ಚಿತ್ರಿಸಿಕೊಂಡು ವಿಡಿಯೋವನ್ನು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಹರಿದು ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಈ ಘಟನೆ ಆಗಸ್ಟ್ 4 ರಂದು ಸಂತಾಲ್ ಪರ್ಗಾನಾ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬುಡಕಟ್ಟು ವಿದ್ಯಾರ್ಥಿನಿಯ ನಗ್ನ ಚಿತ್ರಗಳ ವಿಡಿಯೋ ಬಹಿರಂಗವಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
 
ನಾನು 500 ರೂಪಾಯಿಗಳನ್ನು ನೀಡಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಖರೀದಿಸಿದ್ದೇನೆ. ಆದರೆ. ಹಾಸ್ಟೇಲ್‌‍ನಲ್ಲಿರು ವ ಕೆಲ ವಿದ್ಯಾರ್ಥಿನಿಯರು ನನ್ನ ಮೊಬೈಲ್‌ನ್ನು ಕದ್ದ ಮೊಬೈಲ್ ಎಂದು ಆರೋಪಿಸಿದ್ದಾಗಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.
 
ವಿದ್ಯಾರ್ಥಿಗಳು ನಂತರ ವಿದ್ಯಾರ್ಥಿ ಕೌನ್ಸಿಲ್ ಸಭೆ ಕರೆದು. 18,600 ರೂ ದಂಡವನ್ನು ಪಾವತಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದ್ದಾರೆ. ದಂಡ ತೆರಲು ವಿಫಲವಾದಲ್ಲಿ ನಗ್ನ ವೀಡಿಯೊವನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. 
 
ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿಯ ತಂದೆ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಪುತ್ರಿಗೆ ನ್ಯಾಯ ದೊರೆಯದಿದ್ದಲ್ಲಿ ಆಕೆಯೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರ ಮುಂದೆ ಬೆದರಿಕೆಯೊಡ್ಡಿದ್ದಾನೆ..  
 
ಏತನ್ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ರಘುಬರ್ ದಾಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಮುಂದಿನ ಸುದ್ದಿ