ಕನ್ಹಯ್ಯಾಕುಮಾರ್ ಭಗತ್‌ಸಿಂಗ್‌ರಂತೆ: ಬಿಜೆಪಿ ಸಂಸದ

Webdunia
ಶನಿವಾರ, 4 ನವೆಂಬರ್ 2017 (15:45 IST)
ಜವಾಹರಲಾಲ್ ನೆಹರು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್‌ರಂತೆ ಎಂದು ಬಿಜೆಪಿ ಸಂಸದ ಭೋಲಾ ಸಿಂಗ್ ಹೊಗಳಿದ್ದಾರೆ.
ಪ್ರಧಾನಿ ಮೋದಿ, ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಬಿಜೆಪಿ ಪಕ್ಷದ ಕಟ್ಟಾ ವಿರೋಧಿಯಾಗಿರುವ ಕನ್ಹಯ್ಯಾ ಕುಮಾರ್‌ನನ್ನು ಭಗತ್ ಸಿಂಗ್‌ಗೆ ಹೋಲಿಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
 
ಹೇಳಿಕೆ ವಿವಾದದ ತಿರುವು ಪಡೆಯುತ್ತಿದ್ದರೂ ತಮ್ಮ ಹೇಳಿಕೆಗೆ ಬದ್ಧ ಎಂದಿರುವ ಬಿಜೆಪಿ ಸಂಸದ ಭೋಲಾ ಸಿಂಗ್, ಒಂದು ವೇಳೆ ಕನ್ಹಯ್ಯಾ ಕುಮಾರ್ ದೇಶದ್ರೋಹಿ ಎಂದು ಕೇಂದ್ರ ಸರಕಾರ ಪರಿಗಣಿಸಿದಲ್ಲಿ ಯಾಕೆ ಘೋಷಿಸುತ್ತಿಲ್ಲ ಎಂದು ತಮ್ಮದೇ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.
 
ಬಿಜೆಪಿ ಹಿರಿಯ ನಾಯಕರಾಗಿದ್ದ ಕೈಲಾಶ್‌ಪತಿ ಮಿಶ್ರಾ ಪುಣ್ಯತಿಥಿ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ಭೋಲಾ ಸಿಂಗ್, ಕನ್ಹಯ್ಯಾಕುಮಾರ್‌ರನ್ನು ಭಗತ್ ಸಿಂಗ್‌ಗೆ ಹೋಲಿಸಿದಾಗ ಕಾರ್ಯಕ್ರಮದಲ್ಲಿದ್ದ ಕೆಲವರು ಸಂಸದರ ವಿರುದ್ಧ ಘೋಷಣೆಗಳನ್ನು ಆರಂಭಿಸಿದರು. ಇದರಿಂದ ಬೇಸರಗೊಂಡ ಸಂಸದ ಸಿಂಗ್ ಕಾರ್ಯಕ್ರಮದಿಂದ ತೆರಳಿದ್ದಾರೆ.
 
ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ಕನ್ಹಯ್ಯಾ ಕುಮಾರ್ ದೇಶದ್ರೋಹಿಯಾಗಿದ್ದಲ್ಲಿ ಘೋಷಿಸಲು ಇರುವ ಅಡ್ಡಿಯಾದರೂ ಏನು? ಎಂದು ಬಿಜೆಪಿ ಸಂಸದ ಭೋಲಾ ಸಿಂಗ್ ಪ್ರಶ್ನಿಸಿದ್ದಾರೆ. ಪಕ್ಷದ ವಿರುದ್ಧವಾಗಿ ಹಲವಾರು ಬಾರಿ ಹೇಳಿಕೆ ನೀಡಿದ ಖ್ಯಾತಿಯನ್ನು ಬಿಜೆಪಿ ಸಂಸದ ಭೋಲಾ ಸಿಂಗ್ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪ್ರಧಾನಿ ಮೋದಿ ಉಪಸ್ಥಿತರಿದ್ದ ವೇದಿಕೆಯಲ್ಲಿಯೇ ಸ್ಮಾರ್ಟ್ ಸಿಟಿಯ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಭೋಲಾ ಸಿಂಗ್ ಭಾರಿ ವಿವಾದಕ್ಕೊಳಗಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments