Webdunia - Bharat's app for daily news and videos

Install App

ಯುವತಿಗೆ ನಗ್ನ ಚಿತ್ರ ಕಳುಹಿಸಿದ್ರೆ ಜಾಬ್ ಗ್ಯಾರೆಂಟಿ ಎಂದ ಸಂದರ್ಶಕ

Webdunia
ಮಂಗಳವಾರ, 21 ನವೆಂಬರ್ 2017 (11:52 IST)
ಉದ್ಯೋಗ ಬೇಕಾದಲ್ಲಿ ನಗ್ನ ಚಿತ್ರಗಳನ್ನು ಕಳುಹಿಸಿ ಎಂದು ಯುವತಿಯೊಬ್ಬಳನ್ನು ಒತ್ತಾಯಿಸಿದ 32 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಇಂಜಿನಿಯರಿಂಗ್ ಪದವೀಧರೆಯಾದ ಮಹಿಳೆಯ ದೂರಿನ ಮೇರೆಗೆ ಪೊಲೀಸ್ ಅಧಿಕಾರಿಗಳು ಆರೋಪಿ ಬಿ.ನರೇಂದ್ರ ಸಿಂಗ್‌ನನ್ನು ಬಂಧಿಸಿ ವಿಟಾರಣೆ ನಡೆಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತೆ ಸ್ವಾತಿ ಲಾಕ್ರಾ ತಿಳಿಸಿದ್ದಾರೆ.
 
 
ಐಟಿ ಕ್ಷೇತ್ರದಲ್ಲಿ ಉದ್ಯೋಗಕ್ಕಾಗಿ ಸಂದರ್ಶನಕ್ಕೆ ಹಾಜರಾಗಿದ್ದ ಯುವತಿಯೊಬ್ಬಳು ವಾಟ್ಸಪ್ ಮೂಲಕ ನರೇಂದ್ರ ಸಿಂಗ್‌ನನ್ನು ಸಂಪರ್ಕಿಸಿ, ತಮ್ಮ ಸಂದರ್ಶನದ ಕಥೆ ಏನಾಯಿತು ಎಂದು ಕೇಳಿದ್ದಾರೆ. ಅದಕ್ಕೆ ನರೇಂದ ಸಿಂಗ್ ನಿನ್ನ ನಗ್ನ ಫೋಟೋಗಳನ್ನು ಕಳುಹಿಸಿದಲ್ಲಿ ಉದ್ಯೋಗ ದೊರೆಯುತ್ತದೆ ಎನ್ನುವ ಸಂದೇಶ ರವಾನಿಸಿದ್ದಾನೆ,
 
ನಂತರ ಯುವತಿ ಹಲವಾರು ಬಾರಿ ಕರೆ ಮಾಡಿದಾಗಲೂ ನಿನ್ನ ಹಾಟ್ ಚಿತ್ರಗಳನ್ನು ಕಳುಹಿಸದಿದ್ದಲ್ಲಿ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂದು ಆರೋಪಿ ನರೇಂದ್ರ ಸಿಂಗ್ ಖಡಾಖಂಡಿತವಾಗಿ ಹೇಳಿದ್ದಾನೆ. ಯುವತಿ ತನ್ನ ಚಿತ್ರಗಳನ್ನು ಕಳುಹಿಸದೆ ಪೊಲೀಸರಿಗೆ ದೂರು ನೀಡಿದ್ದಾಳೆ,
 
ಪ್ರತಿಷ್ಠಿತ ಐಟಿ ಕಂಪೆನಿಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡುವ ನರೇಂದ್ರ ಸಿಂಗ್, ಯುವತಿಗೆ ಒಳ್ಳೆಯ ಕಂಪೆನಿಯಲ್ಲಿ ಕೆಲಸ ಕೊಡಿಸುತ್ತೇನೆ. ಆದರೆ, ನಿನ್ನ ನಗ್ನ ಫೋಟೋ ಕಳುಹಿಸಿಕೊಡು ಎಂದು ಕೋರಿದ್ದಾನೆ. ಆದರೆ, ಯುವತಿ ನಿರಾಕರಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ.
 
ಐಟಿ ಕಾಯ್ದೆಯನ್ವಯ ಆರೋಪಿ ನರೇಂದ್ರ ಸಿಂಗ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸ್ವಾತಿ ಲಾಕ್ರಾ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಮುಂದಿನ ಸುದ್ದಿ