Select Your Language

Notifications

webdunia
webdunia
webdunia
webdunia

ಕೃಷ್ಣಮೃಗ ಹತ್ಯೆ ಪ್ರಕರಣ: 18ಕ್ಕೆ ಅಂತಿಮ ತೀರ್ಪು

ಕೃಷ್ಣಮೃಗ ಹತ್ಯೆ ಪ್ರಕರಣ: 18ಕ್ಕೆ ಅಂತಿಮ ತೀರ್ಪು
ಜೋಧ್ಪುರ , ಮಂಗಳವಾರ, 10 ಜನವರಿ 2017 (07:23 IST)
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ವಿರುದ್ಧದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್ಪುರ ಜಿಲ್ಲಾ ನ್ಯಾಯಾಲಯ ಜನವರಿ 18ಕ್ಕೆ ತೀರ್ಪು ಪ್ರಕಟಿಸಲಿದೆ.
 
ಅಂದು ಖುದ್ದು ಹಾಜರಾಗುವಂತೆ ನಟನಿಗೆ ಕೋರ್ಟ್ ಸೂಚಿಸಿದೆ.
 
ಪರವಾನಿಗೆ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಆರೋಪ ಸಲ್ಮಾನ್ ಮೇಲಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ - ಪ್ರತಿವಾದ ಅಂತ್ಯಗೊಂಡಿದ್ದು ತೀರ್ಪನ್ನು 18ಕ್ಕೆ ಕಾಯ್ದಿರಿಸಲಾಗಿದೆ. 
 
1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ನಡೆಯುವಾಗ ಸಲ್ಮಾನ್ ಜೋಧ್ಪುರದ ಬಳಿ ಇರುವ ರಕ್ಷಿತಾರಣ್ಯದಲ್ಲಿ ಕೃಷ್ಣಮೃಗವನ್ನು ಬೇಟೆಯಾಡಿದ್ದರು. ಅವರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
 
ಪ್ರಕರಣಕ್ಕೆ ಸಂಬಂಧಿಸಿದಂತೆ ನಟನಿಗೆ ಈಗಾಗಲೇ ಎರಡು ಬಾರಿ ಜೈಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜನಾರ್ದನ ಪೂಜಾರಿ ವಿರುದ್ಧ ಕಾಂಗ್ರೆಸ್ ಮುಖಂಡನ ಆಕ್ರೋಶ