Publish Date: Sat, 21 Jan 2023 (12:24 IST)
Updated Date: Sat, 21 Jan 2023 (12:08 IST)
ಬೆಂಗಳೂರು : ವಿಧಾನಸಭೆ ಚುನಾವಣೆ ಸಮೀಪ ಬರುತ್ತಿರುವಂತೆಯೇ ರಾಜ್ಯಕ್ಕೆ ಬಿಜೆಪಿ ವರಿಷ್ಠರ ಆಗಮನವೂ ಹೆಚ್ಚಾಗುತ್ತಿದೆ.
ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜ.21 ಶನಿವಾರ ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಜೆ.ಪಿ ನಡ್ಡಾ ಚಾಲನೆ ಕೊಡಲಿದ್ದಾರೆ. ಬೂತ್ ವಿಜಯ ಸಂಕಲ್ಪ ಅಭಿಯಾನದಲ್ಲಿ ಬೂತ್ಗಳ ಮಟ್ಟದಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಜನತೆ ಮುಂದಿಡಲಾಗುತ್ತದೆ.
ಆ ಮೂಲಕ ಸರ್ಕಾರದ ಕಾರ್ಯಕ್ರಮಗಳ ಕುರಿತು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ. ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ.