Webdunia - Bharat's app for daily news and videos

Install App

ಕಟಕಟೆಯಲ್ಲಿ ಶಶಿಕಲಾ: ಇಬ್ಬರು ನ್ಯಾಯಮೂರ್ತಿಗಳಿಂದ ಪ್ರತ್ಯೇಕ ತೀರ್ಪು

Webdunia
ಮಂಗಳವಾರ, 14 ಫೆಬ್ರವರಿ 2017 (09:59 IST)
ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ, ದಿವಂಗತ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಅವರ ರಾಜಕೀಯ ಭವಿಷ್ಯ ಇನ್ನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಅವರನ್ನು ಸುತ್ತಿಕೊಂಡಿರುವ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಇಂದು ಮುಂಜಾನೆ 10.30 ಕ್ಕೆ ಪ್ರಕಟವಾಗಲಿದೆ. 
21 ವರ್ಷಗಳಷ್ಟು ಹಳೆಯ ಈ ಪ್ರಕರಣದ ತೀರ್ಪು ಸದ್ಯ ತಮಿಳುನಾಡಿನಲ್ಲಾಗುತ್ತಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹಳ ಮಹತ್ವವನ್ನು ಪಡೆದುಕೊಂಡಿದೆ. 
 
ನ್ಯಾಯಮೂರ್ತಿಗಳಾದ ಪಿ.ಸಿ. ಘೋಷ್ ಮತ್ತು ಅಮಿತವ್ ರಾಯ್  ಬೆಳಿಗ್ಗೆ 10.30ಕ್ಕೆ ಪ್ರತ್ಯೇಕವಾಗಿ ತೀರ್ಪನ್ನು ಪ್ರಕಟಿಸಲಿದ್ದಾರೆ. ಇಬ್ಬರ ತೀರ್ಪು ಒಂದೇ ಆಗಿಲ್ಲದಿದ್ದರೆ ಅದು ಶಶಿಕಲಾ ಪಾಲಿಗೆ ವರದಾನವೆನಿಸಿಕೊಳ್ಳಲಿದೆ. ಹೀಗಾಗಿದ್ದೇ ಆದರೆ ತ್ರಿಸದಸ್ಯ ಪೀಠ ಹೊಸದಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ. 
 
ಎರಡು ಕಡೆಯಿಂದ ಶಶಿಕಲಾ ದೋಷಿ ಎಂಬ ತೀರ್ಪು ಪ್ರಕಟವಾದರೆ ಶಶಿಕಲಾ ಜೈಲುಪಾಲಾಗುವುದು ನಿಶ್ಚಿತ. ಶಿಕ್ಷೆ ಅವಧಿ ಪೂರ್ಣಗೊಂಡ ನಂತರ ಸಹ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 
 
ಒಂದು ವೇಳೆ ಎರಡು ಕಡೆ ತೀರ್ಪು ಶಶಿಕಲಾ ಪರವಾಗಿ ಬಂದು ಅವರು ಖುಲಾಸೆಯಾದರೆ ಅವರ ರಾಜಕೀಯದ ಹಾದಿ ಸುಗಮವಾಗುತ್ತದೆ. ಮುಖ್ಯಮಂತ್ರಿಯಾಗಲು ಹೆಣಗಾಡುತ್ತಿರುವ ಅವರು ಬಹುಮತ ಸಾಬೀತು ಪಡಿಸಿ ಸಿಎಂ ಕುರ್ಚಿಯನ್ನು ಏರಬಹುದು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments