Webdunia - Bharat's app for daily news and videos

Install App

ವೃತ್ತಿ ಜೀವನದ ಕೊನೆಯ ದಿನ ಮರೆಯಲಾಗದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್ ಜಸ್ಟಿಸ್ ಚಂದ್ರಚೂಡ್

Krishnaveni K
ಮಂಗಳವಾರ, 12 ನವೆಂಬರ್ 2024 (16:27 IST)
Photo Credit: X
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತಿಯಾಗುವ ಮೊದಲು ಜಸ್ಟಿಸ್ ಡಿವೈ ಚಂದ್ರಚೂಡ್ ಮರೆಯಲಾಗದ ತೀರ್ಪು ಕೊಟ್ಟು ನಿರ್ಗಮಿಸಿದ್ದಾರೆ.

ಉತ್ತರ ಪ್ರದೇಶದ 62 ವರ್ಷದ ಅಶೋಕ್ ರಾಣ ಮತ್ತು ಅವರ ಪತ್ನಿ, 55 ವರ್ಷದ ನಿರ್ಮಲಾ ದೇವಿ ತಮ್ಮ ಅನಾರೋಗ್ಯ ಪೀಡಿತ ಮಗನಿಗೆ ದಯಾಮರಣಕ್ಕೆ ಅವಕಾಶ ನಿಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಕಳೆದ 12 ವರ್ಷಗಳಿಂದ ಮಗ ಜೀವಂತ ಶವವಾಗಿದ್ದಾನೆ.

ಆತನ ಖರ್ಚು ವೆಚ್ಚಗಳನ್ನು ನೋಡಿಕೊಳ್ಳಲು ಆರ್ಥಿಕವಾಗಿ ನಾವು ಶಕ್ತರಾಗಿಲ್ಲ. ಜೊತೆಗೆ ಆತನೂ ಅತ್ತ ಸಾಯಲೂ ಆಗದೇ ಇತ್ತ ಬದುಕಲೂ ಆಗದೇ ಹೋರಾಟ ನಡೆಸುತ್ತಲೇ ಬಂದಿದ್ದಾನೆ. ಹೀಗಾಗಿ ಆತನಿಗೆ ನೀಡಿರುವ ಜೀವ ರಕ್ಷಕ ಸಾಧನವನ್ನು ತೆಗೆದು ದಯಾಮರಣ ನೀಡಲು ಅವಕಾಶ ನೀಡಬೇಕು ಎಂದು ವೃದ್ಧ ದಂಪತಿ ಕೋರ್ಟ್ ಮೊರೆ ಹೋಗಿದ್ದರು.

ತಮ್ಮ ವೃತ್ತಿ ಜೀವನದಲ್ಲಿ ಈ ಅಪರೂಪದ ಕೇಸ್ ತೀರ್ಪು ನೀಡಿದ ಜಸ್ಟಿಸ್ ಚಂದ್ರಚೂಡ್ ಈ ವೃದ್ಧ ದಂಪತಿಗೆ ಮಗನಿಗೆ ಚಿಕಿತ್ಸೆ ಕೊಡಿಸಲು ಉತ್ತರ ಪ್ರದೇಶ ಸರ್ಕಾರದಿಂದಲೇ ಸಹಾಯ ಮಾಡಿಕೊಡಲು ಆದೇಶ ನೀಡಿದ್ದಾರೆ. ಇದರಿಂದಾಗಿ ಸರ್ಕಾರವೇ ಆತನ ವೈದ್ಯಕೀಯ ವೆಚ್ಚವನ್ನು ಭರಿಸಲಿದೆ. ಒಂದು ವೇಳೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಕಷ್ಟವಾದರೆ ಆತನನ್ನು ನೋಯ್ಡಾದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲೂ ಜಸ್ಟಿಸ್ ಚಂದ್ರಚೂಡ್ ಆದೇಶ ನೀಡಿದ್ದಾರೆ. ಅವರ ಈ ತೀರ್ಪಿನಿಂದಾಗಿ ವೃದ್ಧ ದಂಪತಿ ಕೊಂಚ ಸಮಾಧಾನ ಪಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments