Webdunia - Bharat's app for daily news and videos

Install App

ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್!

Webdunia
ಭಾನುವಾರ, 26 ಜೂನ್ 2022 (11:24 IST)
ಪಾಟ್ನಾ : ಗಂಡನೊಂದಿಗೆ ಬಳೆ ಖರೀದಿಸಲು ಹೋದ ಪತ್ನಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಬಿಹಾರದ ಮುಂಗೇರ್ನಲ್ಲಿ ನಡೆದಿದೆ.

ಜೂನ್ 14ರಂದು ಮುಂಗೇರ್ ನಿವಾಸಿ ರಾಮವಿಲಾಸ್ ಗುಪ್ತಾ ಅವರ ಪುತ್ರ ವಿವೇಕ್ ಪೊದ್ದಾರ್ ಹಾಗೂ ನೌವಾಗರ್ಹಿ ನಿವಾಸಿ ರಾಮ್ವಿಲಾಸ್ ಪೊದ್ದಾರ್ ಅವರ ಪುತ್ರಿ ಮೋನಿ ಕುಮಾರಿ ವಿವಾಹವಾಗಿದ್ದರು. ಹೊಸದಾಗಿ ಮದುವೆಯಾದ ನವದಂಪತಿ ಕುಟುಂಬಸ್ಥರ ಮನೆಗೆ ಭೇಟಿ ನೀಡುತ್ತಿದ್ದರು.

ಜೂನ್ 22ರಂದು ಸಂಜೆ ಮೋನಿ ಕುಮಾರಿ ಬಳೆ ಖರೀದಿಸಲು ನಗರಕ್ಕೆ ಹೋಗಿದ್ದಾಳೆ. ಈ ವೇಳೆ ಕಾರ್ನಿಂದ ಬಂದ ನವದಂಪತಿಗೆ ಅಡ್ಡಹಾಕಿ ಪತಿ ವಿವೇಕ್ಗೆ ಗನ್ ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಮತ್ತೊಂದೆಡೆ ಮೋನಿ ಕುಮಾರಿಯನ್ನು ಕಾರ್ ಒಳಗೆ ಹತ್ತಿಸಿಕೊಂಡು ಪರಾರಿಯಾಗಿದ್ದಾರೆ. ನಂತರ ಗಾಬರಿಗೊಂಡ ಪತಿ ವಿವೇಕ್ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. 

ಇದಾದ ಬಳಿಕ ಮನೆಗೆ ಬಂದು ನೋಡಿದರೆ, ಮನೆಯಲ್ಲಿದ್ದ ಒಡವೆ ಯಾವುದೇ ಕಾಣಲಿಲ್ಲ. ಅಲ್ಲದೇ ಮೋನಿಗೆ ಬೇಕಾದ ವಸ್ತುಗಳು ಕೂಡ ರೂಮ್ನಲ್ಲಿ ಇರಲಿಲ್ಲ. ಈ ಬಗ್ಗೆ ಅನುಮಾನಗೊಂಡ ವಿವೇಕ್ ಪೊಲೀಸರಿಗೆ ತಿಳಿಸಿದ್ದಾರೆ. ಮೋನಿ ಮೊಬೈಲ್ ಪರಿಶೀಲನೆ ನಡೆಸಿದ ವಿವೇಕ್ಗೆ ವ್ಯಕ್ತಿಯೋರ್ವ ಪದೇ, ಪದೇ ಕರೆ ಮಾಡಿರುವ ವಿಚಾರ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ