Webdunia - Bharat's app for daily news and videos

Install App

ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್!

Webdunia
ಭಾನುವಾರ, 26 ಜೂನ್ 2022 (11:24 IST)
ಪಾಟ್ನಾ : ಗಂಡನೊಂದಿಗೆ ಬಳೆ ಖರೀದಿಸಲು ಹೋದ ಪತ್ನಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಬಿಹಾರದ ಮುಂಗೇರ್ನಲ್ಲಿ ನಡೆದಿದೆ.

ಜೂನ್ 14ರಂದು ಮುಂಗೇರ್ ನಿವಾಸಿ ರಾಮವಿಲಾಸ್ ಗುಪ್ತಾ ಅವರ ಪುತ್ರ ವಿವೇಕ್ ಪೊದ್ದಾರ್ ಹಾಗೂ ನೌವಾಗರ್ಹಿ ನಿವಾಸಿ ರಾಮ್ವಿಲಾಸ್ ಪೊದ್ದಾರ್ ಅವರ ಪುತ್ರಿ ಮೋನಿ ಕುಮಾರಿ ವಿವಾಹವಾಗಿದ್ದರು. ಹೊಸದಾಗಿ ಮದುವೆಯಾದ ನವದಂಪತಿ ಕುಟುಂಬಸ್ಥರ ಮನೆಗೆ ಭೇಟಿ ನೀಡುತ್ತಿದ್ದರು.

ಜೂನ್ 22ರಂದು ಸಂಜೆ ಮೋನಿ ಕುಮಾರಿ ಬಳೆ ಖರೀದಿಸಲು ನಗರಕ್ಕೆ ಹೋಗಿದ್ದಾಳೆ. ಈ ವೇಳೆ ಕಾರ್ನಿಂದ ಬಂದ ನವದಂಪತಿಗೆ ಅಡ್ಡಹಾಕಿ ಪತಿ ವಿವೇಕ್ಗೆ ಗನ್ ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಮತ್ತೊಂದೆಡೆ ಮೋನಿ ಕುಮಾರಿಯನ್ನು ಕಾರ್ ಒಳಗೆ ಹತ್ತಿಸಿಕೊಂಡು ಪರಾರಿಯಾಗಿದ್ದಾರೆ. ನಂತರ ಗಾಬರಿಗೊಂಡ ಪತಿ ವಿವೇಕ್ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. 

ಇದಾದ ಬಳಿಕ ಮನೆಗೆ ಬಂದು ನೋಡಿದರೆ, ಮನೆಯಲ್ಲಿದ್ದ ಒಡವೆ ಯಾವುದೇ ಕಾಣಲಿಲ್ಲ. ಅಲ್ಲದೇ ಮೋನಿಗೆ ಬೇಕಾದ ವಸ್ತುಗಳು ಕೂಡ ರೂಮ್ನಲ್ಲಿ ಇರಲಿಲ್ಲ. ಈ ಬಗ್ಗೆ ಅನುಮಾನಗೊಂಡ ವಿವೇಕ್ ಪೊಲೀಸರಿಗೆ ತಿಳಿಸಿದ್ದಾರೆ. ಮೋನಿ ಮೊಬೈಲ್ ಪರಿಶೀಲನೆ ನಡೆಸಿದ ವಿವೇಕ್ಗೆ ವ್ಯಕ್ತಿಯೋರ್ವ ಪದೇ, ಪದೇ ಕರೆ ಮಾಡಿರುವ ವಿಚಾರ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ