ಆರೆಸ್ಸೆಸ್ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಿದ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ಕೈಲಾಸ್ ವಿಜಯವರ್ಗೀಯ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ತಾಕತ್ತಿದ್ರೆ ಎಡಪಕ್ಷಗಳ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಿ ಎಂದು ಸವಾಲ್ ಹಾಕಿದ್ದಾರೆ.
ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿರುವ ಆರೆಸ್ಸೆಸ್ ಕಚೇರಿಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಿಪಿಐ-ಎಂ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸುವ ಧೈರ್ಯ ತೋರುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆರೆಸ್ಸೆಸ್ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಗೀತೆಯನ್ನು ಹಾಡಿದ್ದಾರೆ. ಕಾಂಗ್ರೆಸ್ ಪಕ್ಷ ಕೇವಲ ದೇಶಭಕ್ತಿಯನ್ನು ತೋರಿಕೆಗಾಗಿ ಮಾಡುತ್ತಿದೆ. ಆದರೆ, ಆರೆಸ್ಸೆಸ್ ಮುಖಂಡರ ನರನಾಡಿಗಳಲ್ಲಿ ದೇಶಭಕ್ತಿಯ ಕಿಚ್ಚು ಹರಿಯುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಆರೆಸ್ಸೆಸ್ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಪ್ರೇರಣೆ ನೀಡಿದ್ದಾರೆ. ಆದರೆ, ಆರೆಸ್ಸೆಸ್ ಕಚೇರಿಗೆ ರಾಷ್ಟ್ರಧ್ವಜ ಹಾರಿಸಲು ಬಂದ ಕಾಂಗ್ರೆಸ್ ಕಾರ್ಯಕರ್ತರನ್ನು ಆರೆಸೆಸ್ ಮುಖಂಡರು ಅಭಿನಂಧಿಸಿ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ತಿಳಿಸಿದ್ದಾರೆ.