ಹಿಂದೂ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಂಡು ಓಡಾಡಿ: ಕಲ್ಲಡ್ಕ ಪ್ರಭಾಕರ್ ಭಟ್ ಸಲಹೆ

Krishnaveni K
ಮಂಗಳವಾರ, 29 ಏಪ್ರಿಲ್ 2025 (11:57 IST)
ಕಾಸರಗೋಡು: ಹಿಂದೂ ಹೆಣ್ಣು ಮಕ್ಕಳು ಇನ್ನು ಮುಂದೆ ಬ್ಯಾಗ್ ನಲ್ಲಿ ಚೂರಿ ಇಟ್ಕೊಂಡು ಓಡಾಡಿ. ಆಗ ನಿಮಗೆ ಯಾರೂ ಏನೂ ಮಾಡಕ್ಕಾಗಲ್ಲ ಎಂದು ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
 

 ಪಹಲ್ಗಾಮ್ ನಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಉಗ್ರರು ದಾಳಿ ನಡೆಸಿರುವ ಬಗ್ಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವೇಳೆ ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲ್ವಾರ್ ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗ್ತಿತ್ತು ಎಂದಿದ್ದಾರೆ.

ಹಿಂದೂ ಹೆಣ್ಣು ಮಕ್ಕಳು ನಿಮ್ಮನ್ನು ನೀವು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಇನ್ನು ಮುಂದೆ ಹೊರಗೆ ಹೋಗುವಾಗ ಬ್ಯಾಗ್ ನಲ್ಲಿ ಆರಿಂಚು ಉದ್ದದ ಚೂರಿ ಇಟ್ಕೊಳ್ಳಿ. ಸಂಜೆ ಮೇಲೆ ಹೊರಗಡೆ ಹೋಗುವಾಗ ನಿಮ್ಮ ಸುರಕ್ಷತೆಗೆ ಬೇಕಾಗುತ್ತದೆ.

ಚೂರಿ ಇಟ್ಕೊಳ್ಳಲು ಯಾರ ಪರ್ಮಿಷನ್ ಕೂಡಾ ಬೇಕಾಗಿಲ್ಲ. ಸಂಜೆ ಮೇಲೆ ಓಡಾಡುವಾಗ ಯಾರಾದರೂ ನಿಮ್ಮ ಮೇಲೆ ಆಕ್ರಮಣ ಮಾಡುತ್ತಾರೆ. ಆಗ ಅವರ ಬಳಿ ಬೇಡಿಕೊಂಡರೆ ಪ್ರಯೋಜನವಿಲ್ಲ. ಅದರ ಬದಲು ಚೂರಿ ತೋರಿಸಿ ಬಾ ಎಂದು ಸವಾಲು ಹಾಕಿ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಸಲಹೆ ನೀಡಿದ್ದಾರೆ.

https://kannada.webdunia.com/article/news-in-kannada/pehalgam-attack-gyp-line-operater-says-allah-akbar-in-three-times-nia-probes-125042900012_1.html

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments