Webdunia - Bharat's app for daily news and videos

Install App

ಕಲ್ಲಕುರಿಚಿ ಕಳ್ಳಬಟ್ಟಿ ದುರಂತ: ಮೃತರ ಸಂಖ್ಯೆ 53ಕ್ಕೆ ಏರಿಕೆ, 7ಮಂದಿ ಅರೆಸ್ಟ್

Sampriya
ಶನಿವಾರ, 22 ಜೂನ್ 2024 (15:19 IST)
Photo Courtesy X
ತಮಿಳುನಾಡು: ಕಲ್ಲಕುರಿಚಿ ನಡೆದ ಕಳ್ಳಬಟ್ಟಿ ದುರಂತದಲ್ಲಿ ಮೃತರ ಸಂಖ್ಯೆ 50 ರಿಂದ 53 ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅಕ್ರಮ ಮದ್ಯ ಸೇವಿಸಿದ ಒಟ್ಟು 193 ರೋಗಿಗಳ ಪೈಕಿ 140 ಮಂದಿ ಸುರಕ್ಷಿತವಾಗಿದ್ದಾರೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ತಿಳಿಸಿದ್ದಾರೆ.

"ಅಕ್ರಮ ಮದ್ಯ ಸೇವಿಸಿದ 193 ಜನರು ಆಸ್ಪತ್ರೆಗೆ ಬಂದಿದ್ದಾರೆ. ಅದರಲ್ಲಿ 193, 140 ಜನರು ಪ್ರಸ್ತುತ ಸುರಕ್ಷಿತವಾಗಿದ್ದಾರೆ, ಅವರಲ್ಲಿ ಕೆಲವರು ವೆಂಟಿಲೇಟರ್‌ಗಳಲ್ಲಿದ್ದಾರೆ. ಇದೀಗ, 53 ಜನರು ಸಾವನ್ನಪ್ಪಿದ್ದಾರೆ" ಎಂದು ಅವರು ಹೇಳಿದರು.

ಪ್ರಕರಣದಲ್ಲಿ ಇದುವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ತಮಿಳುನಾಡು ಪೊಲೀಸರ ಸಿಬಿಐ ಸಿಐಡಿ ಶಾಖೆಗೆ ನೀಡಲಾಗಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭಿಕ ಹಂತದಲ್ಲಿ ವಿಶೇಷ ವೈದ್ಯರನ್ನು ತಂಡವನ್ನು ರಚಿಸಲಾಗಿದೆ.

ಸುಮಾರು 56 ವೈದ್ಯರನ್ನು ಕರೆತರಲಾಗಿದೆ. ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಉಸಿರಾಟದ ತೊಂದರೆ ಇರುವ ಅನೇಕ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಕಲ್ಲಾಕುರಿಚಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದೇ ವೇಳೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ತಿರುಚಿರಾಪಳ್ಳಿ ಜಿಲ್ಲೆಯಲ್ಲಿ 250 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ವಿಲೇವಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments