Webdunia - Bharat's app for daily news and videos

Install App

ಕಮಲ್ ಹಾಸನ್ ಮೊದಲು ಮೆದುಳು ಪರೀಕ್ಷೆ ಮಾಡಿಸಿಕೊಳ್ಳಬೇಕು: ಅಣ್ಣಾಮಲೈ ಕಿಡಿ

Krishnaveni K
ಮಂಗಳವಾರ, 9 ಏಪ್ರಿಲ್ 2024 (15:12 IST)
Photo Courtesy: Twitter
ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ನಟ, ರಾಜಕಾರಣಿ ಕಮಲ್ ಹಾಸನ್ ಬಿಜೆಪಿ ವಿರುದ್ಧ ಮಾಡಿದ ಕಾಮೆಂಟ್ ಗೆ ಬಿಜೆಪಿ ನಾಯಕ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಮಲ್ ಹಾಸನ್ ಟೀಕಾ ಪ್ರಹಾರ ನಡೆಸಿದ್ದಾರೆ. ಈ ವೇಳೆ ಮುಂದಿನ ಸಾರಿಯೂ ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಮ್ಮ ರಾಷ್ಟ್ರದ ರಾಜಧಾನಿ ದೆಹಲಿಯಿಂದ ನಾಗ್ಪುರಕ್ಕೆ ಶಿಫ್ಟ್ ಆಗಲಿದೆ ಎಂದು ವ್ಯಂಗ್ಯ ಮಾಡಿದ್ದರು. ನಾಗ್ಪುರ ಆರ್ ಎಸ್ಎಸ್ ನ ಕೇಂದ್ರ ಸ್ಥಾನ ಎನ್ನುವ ಕಾರಣಕ್ಕೆ ಕಮಲ್ ಈ ರೀತಿ ವ್ಯಂಗ್ಯ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಕಮಲ್ ಹಾಸನ್ ಗೆ ಎಲ್ಲವೂ ಸರಿಯಾಗಿದೆಯಾ? ಅವರು ಸರಿಯಾಗಿ ಹೊಟ್ಟೆಗೆ ಅನ್ನ ತಿನ್ನುತ್ತಿದ್ದಾರಾ? ಅವರು ಮಾತನಾಡುವುದನ್ನು ನೋಡಿದರೆ ಮೊದಲು ಅವರ ಮೆದುಳು ಪರೀಕ್ಷೆ ಮಾಡುವುದು ಉತ್ತಮ. ರಾಷ್ಟ್ರ ರಾಜಧಾನಿಯನ್ನು ದೆಹಲಿಯಿಂದ ನಾಗ್ಪುರಕ್ಕೆ ಶಿಫ್ಟ್ ಮಾಡಲು ಹೇಗೆ ಸಾಧ‍್ಯ? ಮಾತನಾಡುವುದಕ್ಕೆ ಸೆನ್ಸ್ ಬೇಡವೇ?’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಷ್ಟೇ ಅಲ್ಲದೆ, ಕಮಲ್ ಹಾಸನ್, ನಮಗೆ ಗುಜರಾತ್ ಮಾಡೆಲ್ ಎಂದಿದ್ದು ಸಾಕು. ನಮಗೆ ದ್ರಾವಿಡಿಯನ್ ಮಾಡೆಲ್ ನ ಆಡಳಿತ ಬೇಕು.ಅದಕ್ಕಾಗಿ ನಾವು ಡಿಎಂಕೆಯನ್ನು ಬೆಂಬಲಿಸೋಣ ಎಂದು ಕರೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments