Webdunia - Bharat's app for daily news and videos

Install App

ಕಮಲ್ ಹಾಸನ್ ಮೊದಲು ಮೆದುಳು ಪರೀಕ್ಷೆ ಮಾಡಿಸಿಕೊಳ್ಳಬೇಕು: ಅಣ್ಣಾಮಲೈ ಕಿಡಿ

Krishnaveni K
ಮಂಗಳವಾರ, 9 ಏಪ್ರಿಲ್ 2024 (15:12 IST)
Photo Courtesy: Twitter
ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ನಟ, ರಾಜಕಾರಣಿ ಕಮಲ್ ಹಾಸನ್ ಬಿಜೆಪಿ ವಿರುದ್ಧ ಮಾಡಿದ ಕಾಮೆಂಟ್ ಗೆ ಬಿಜೆಪಿ ನಾಯಕ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಕಮಲ್ ಹಾಸನ್ ಟೀಕಾ ಪ್ರಹಾರ ನಡೆಸಿದ್ದಾರೆ. ಈ ವೇಳೆ ಮುಂದಿನ ಸಾರಿಯೂ ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನಮ್ಮ ರಾಷ್ಟ್ರದ ರಾಜಧಾನಿ ದೆಹಲಿಯಿಂದ ನಾಗ್ಪುರಕ್ಕೆ ಶಿಫ್ಟ್ ಆಗಲಿದೆ ಎಂದು ವ್ಯಂಗ್ಯ ಮಾಡಿದ್ದರು. ನಾಗ್ಪುರ ಆರ್ ಎಸ್ಎಸ್ ನ ಕೇಂದ್ರ ಸ್ಥಾನ ಎನ್ನುವ ಕಾರಣಕ್ಕೆ ಕಮಲ್ ಈ ರೀತಿ ವ್ಯಂಗ್ಯ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಕಮಲ್ ಹಾಸನ್ ಗೆ ಎಲ್ಲವೂ ಸರಿಯಾಗಿದೆಯಾ? ಅವರು ಸರಿಯಾಗಿ ಹೊಟ್ಟೆಗೆ ಅನ್ನ ತಿನ್ನುತ್ತಿದ್ದಾರಾ? ಅವರು ಮಾತನಾಡುವುದನ್ನು ನೋಡಿದರೆ ಮೊದಲು ಅವರ ಮೆದುಳು ಪರೀಕ್ಷೆ ಮಾಡುವುದು ಉತ್ತಮ. ರಾಷ್ಟ್ರ ರಾಜಧಾನಿಯನ್ನು ದೆಹಲಿಯಿಂದ ನಾಗ್ಪುರಕ್ಕೆ ಶಿಫ್ಟ್ ಮಾಡಲು ಹೇಗೆ ಸಾಧ‍್ಯ? ಮಾತನಾಡುವುದಕ್ಕೆ ಸೆನ್ಸ್ ಬೇಡವೇ?’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಷ್ಟೇ ಅಲ್ಲದೆ, ಕಮಲ್ ಹಾಸನ್, ನಮಗೆ ಗುಜರಾತ್ ಮಾಡೆಲ್ ಎಂದಿದ್ದು ಸಾಕು. ನಮಗೆ ದ್ರಾವಿಡಿಯನ್ ಮಾಡೆಲ್ ನ ಆಡಳಿತ ಬೇಕು.ಅದಕ್ಕಾಗಿ ನಾವು ಡಿಎಂಕೆಯನ್ನು ಬೆಂಬಲಿಸೋಣ ಎಂದು ಕರೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments