Webdunia - Bharat's app for daily news and videos

Install App

ಜನರನ್ನು ಮೂರ್ಖರನ್ನಾಗಿಸಲು ಎಐಎಡಿಎಂಕೆ ಬಣಗಳ ಮೈತ್ರಿ: ಕಮಲ್‌ಹಾಸನ್ ವಾಗ್ದಾಳಿ

Webdunia
ಸೋಮವಾರ, 21 ಆಗಸ್ಟ್ 2017 (18:49 IST)
ಎಐಎಡಿಎಂಕೆ ಪಕ್ಷದ ಎರಡು ಬಣಗಳು ಒಂದಾಗಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸುತ್ತಿವೆ ಎಂದು ಖ್ಯಾತ ನಟ ಕಮಲ್‌ಹಾಸನ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ.  
ಗಾಂಧಿ ಟೋಪಿ, ಕಾಶ್ಮಿರಿ ಟೋಪಿ ಮತ್ತು ಇದೀಗ ಜೋಕರ್ ಟೋಪಿ ಇಷ್ಟು ಟೋಪಿಗಳು ಸಾಕಾ ಇನ್ನೂ ಬೇಕಾ ತಮಿಳರೇ ದಯವಿಟ್ಟು ಉತ್ತರಿಸಿ ಎಂದು ಟ್ವೀಟ್ ಮಾಡಿದ್ದಾರೆ.
 
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಬಣ ಮತ್ತು ಪನ್ನೀರ್ ಸೆಲ್ವಂ ಬಣ ಇಂದು ಮಧ್ಯಾಹ್ನ ಒಂದಾದ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಹೇಳಿಕೆ ಹೊರಬಿದ್ದಿದೆ. 
 
ಎಐಎಡಿಎಂಕೆ ಪಕ್ಷದಲ್ಲಿ ಇಂದು ನಡೆದ ಬೆಳವಣಿಗೆಯಲ್ಲಿ ಉಭಯ ಬಣಗಳು ವಿಲೀನಗೊಂಡಿವೆ. ಪನ್ನೀರ್ ಸೆಲ್ವಂ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಲ್ಲದೇ ಎಐಎಡಿಎಂಕೆ ಪಕ್ಷದ ಸಂಚಾಲಕರಾಗಿ ಮುಂದುವರಿಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments