Webdunia - Bharat's app for daily news and videos

Install App

ಮೊದಲ ಬಾರಿಗೆ ಸಂಸತ್ ನಲ್ಲಿ ಬಾಷಣ ಮಾಡಿದ ಕಂಗನಾ ರನೌತ್ ಹೇಳಿದ ವಿಚಾರವೇನು

Krishnaveni K
ಗುರುವಾರ, 25 ಜುಲೈ 2024 (16:38 IST)
ನವದೆಹಲಿ: ಇದೇ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿರುವ ಬಾಲಿವುಡ್ ನಟಿ ಕಂಗನಾ ರನೌತ್ ಇಂದು ಮೊದಲ ಬಾರಿಗೆ ಸಂಸತ್ ನಲ್ಲಿ ಮಾತನಾಡಿದ್ದಾರೆ. ಮೊದಲ ಭಾಷಣದಲ್ಲೇ ಕಂಗನಾ ಹೇಳಿದ್ದೇನು?

ಕಂಗನಾ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದರು. ಇದುವರೆಗೆ ಅವರಿಗೆ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಇದೇ ಮೊದಲ ಬಾರಿಗೆ ಕಂಗನಾ ಮಾತನಾಡಿದ್ದು ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ.

‘ಮಂಡಿಯಲ್ಲಿ ಅನೇಕ ಕಲಾಕೃತಿಗಳು ಅಳಿವಿನ ಅಂಚಿನಲ್ಲಿದೆ. ಹಿಮಾಚಲ ಪ್ರದೇಶದಲ್ಲಿ ಕಥ್ ಕುಣಿ ಎಂಬ ಸ್ಥಳೀಯ ನಿರ್ಮಾಣ ಕಲಾಕೃತಿಯಿದೆ. ಕುರಿಗಳ ಚರ್ಮದಿಂದ ಬಟ್ಟೆ,ಜಾಕೆಟ್ ತಯಾರಿಸುತ್ತಾರೆ. ಇದು ಅಪರೂಪದ ಕಲಾಕೃತಿಯಾಗಿದ್ದು, ಇದನ್ನು ಪ್ರಚುರಪಡಿಸಲು ನಾವು ಕೆಲವು ಯೋಜನೆ ಕೈಗೆತ್ತಿಕೊಳ್ಳಬೇಕಾಗಿದೆ. ಮಾಂಡಿ ಕ್ಷೇತ್ರದ ಜಾನಪದ ಕಲೆ ಉಳಿಸಲು ನಾವು ಕೆಲಸ ಮಾಡಬೇಕಿದೆ. ಇಂದು ಮೊದಲ ಬಾರಿಗೆ ಮಂಡಿ ಕ್ಷೇತ್ರದ ಪರವಾಗಿ ಮಾತನಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು’ ಎಂದು ಕಂಗನಾ ಹೇಳಿದ್ದಾರೆ.

ಕಂಗನಾ ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗಿದ್ದವರು. ಸಂಸದೆಯಾದ ಬಳಿಕವೂ ಅವರಿಗೆ ವಿಮಾನ ನಿಲ್ದಾಣದಲ್ಲಿ ಕಪಾಳ ಮೋಕ್ಷವಾದ ಘಟನೆ ಭಾರೀ ಸುದ್ದಿಯಾಗಿತ್ತು. ಇದೀಗ ಸಂಸತ್ ನಲ್ಲಿ ಮೊದಲ ಬಾರಿಗೆ ಮಾತನಾಡಿ ಸುದ್ದಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments