Webdunia - Bharat's app for daily news and videos

Install App

ಕಣ್ಣೂರು: ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗಿ 8 ವಿದ್ಯಾರ್ಥಿಗಳು ಅಸ್ವಸ್ಥ

Sampriya
ಶನಿವಾರ, 29 ಜೂನ್ 2024 (18:07 IST)
ಕೇರಳ: ಕಣ್ಣೂರಿನ ರಾಮಪುರಂನಲ್ಲಿ ಟ್ಯಾಂಕರ್ ಲಾರಿಯಿಂದ ಗ್ಯಾಸ್ ಸೋರಿಕೆಯಾಗಿ ನರ್ಸಿಂಗ್ ಕಾಲೇಜಿನ ಕನಿಷ್ಠ 8 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ನಡೆದಿದೆ.  

ಈ ಜಿಲ್ಲೆಯ ರಾಮಪುರಂನಲ್ಲಿ ಟ್ಯಾಂಕರ್ ಲಾರಿಯಿಂದ ಅನಿಲ ಸೋರಿಕೆಯಾದ ನಂತರ ನರ್ಸಿಂಗ್ ಕಾಲೇಜಿನ ಕನಿಷ್ಠ ಎಂಟು ವಿದ್ಯಾರ್ಥಿಗಳು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಮತ್ತು ಪಜಯಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಟ್ಯಾಂಕರ್ ಲಾರಿ ನೆರೆಯ ಕರ್ನಾಟಕದಿಂದ ಎರ್ನಾಕುಲಂಗೆ ತೆರಳುತ್ತಿದ್ದಾಗ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾಗಿದೆ.

ಪಯ್ಯನ್ನೂರಿನಿಂದ ಅಗ್ನಿಶಾಮಕ ದಳದ ತಂಡ ಮತ್ತು ಪರಿಯಾಯಂ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮಗಳನ್ನು ಪ್ರಾರಂಭಿಸಿದರೂ, ಸೋರಿಕೆಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಂಟೈನರ್‌ನ ಹಿಂಬದಿಯ ವಾಲ್ವ್‌ನಲ್ಲಿ ಸೋರಿಕೆ ಕಂಡುಬಂದಿದ್ದು, ಅಗ್ನಿಶಾಮಕ ದಳದಿಂದ ವಾಹನವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments