Webdunia - Bharat's app for daily news and videos

Install App

ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ರೈಲು

Webdunia
ಶುಕ್ರವಾರ, 5 ಫೆಬ್ರವರಿ 2016 (08:50 IST)
ಬೆಂಗಳೂರು- ಕನ್ಯಾಕುಮಾರಿ ಐಲ್ಯಾಂಡ್‌ ಎಕ್ಸ್‌‌ಪ್ರೆಸ್‌‌ ತಮಿಳುನಾಡಿನ ವೇಲೂರು ಜಿಲ್ಲೆಯ ಜೋಲಾರಪೇಟೆ ಬಳಿ ಇಂದು ನಸುಕಿನ ಜಾವ ಹಳಿ ತಪ್ಪಿದ್ದು ಘಟನೆಯಲ್ಲಿ 13 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ರೈಲು ಇಲಾಖೆ ಮೂಲಗಳು ತಿಳಿಸಿವೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಬೆಂಗಳೂರಿಗೆ ರವಾನಿಸಲಾಗಿದೆ. 

ಬೆಳಗ್ಗೆ 5.30 ಸುಮಾರಿಗೆ ಘಟನೆ ನಡೆದಿದ್ದು,4 ಬೋಗಿಗಳು ಹಳಿ ತಪ್ಪಿವೆ. ಒಂದು ಬೋಗಿ ಪಲ್ಟಿಯಾಗಿದ್ದು ಘಟನೆಯಿಂದ ಬೆಂಗಳೂರು-ಚೆನ್ನೈ ರೈಲು ಮಾರ್ಗದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿವೆ. ಮಾರ್ಗಗಳು ಸಂಚಾರಕ್ಕೆ ಮುಕ್ತವಾಗದ ಹಿನ್ನೆಲೆಯಲ್ಲಿ ಚೆನ್ನೈ -ಬೆಂಗಳೂರು ಮಾರ್ಗದ ಎರಡು ರೈಲುಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತೆರಳಲೆಂದು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
 
ಬೆಂಗಳೂರು- ಚೆನ್ನೈ ನಡುವೆ ಸಂಚರಿಸುವ ಬೃಂದಾವನ ಎಕ್ಸಪ್ರೆಸ್ ಮತ್ತು ಡಬಲ್ ಡೆಕ್ಕರ್ ರೈಲುಗಳು ಇಂದು ಸಂಚರಿಸುತ್ತಿಲ್ಲ. 
 
ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments