Webdunia - Bharat's app for daily news and videos

Install App

ಕಪಿಲ್ ಮಿಶ್ರಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ: ಸತ್ಯೆಂದ್ರ ಜೈನ್

Webdunia
ಸೋಮವಾರ, 8 ಮೇ 2017 (20:17 IST)
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಎರಡು ಕೋಟಿ ರೂಪಾಯಿ ಲಂಚ ನೀಡಿದ್ದೇನೆ ಎಂದು ಆರೋಪಿಸಿರುವ ಮಾಜಿ ಸಚಿವ ಕಪಿಲ್ ಮಿಶ್ರಾ, ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ ಎಂದು ಆರೋಗ್ಯ ಖಾತೆ ಸಚಿವ ಸತ್ಯೇಂದ್ರ ಜೈನ್ ವಾಗ್ದಾಳಿ ನಡೆಸಿದ್ದಾರೆ.  

ಕಳೆದ ಮೇ 5 ರಂದು ನಾನು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸಕ್ಕೆ ಹೋಗಿಯೇ ಇಲ್ಲ. ಇದನ್ನು ಸಾಬೀತುಪಡಿಸಲು ನನ್ನ ಬಳಿ ಸಾಕ್ಷ್ಯಗಳಿವೆ. ಸುಳ್ಳು ಹೇಳುವುದಕ್ಕೂ ಮಿತಿಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಚಿವ ಸ್ಥಾನದಿಂದ ವಜಾಗೊಳಿಸಿದ ನಂತರ ಮಿಶ್ರಾ ಮಾನಸಿಕ ಸ್ಥಿಮಿತ ಕಳೆದುಕೊಂಡು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾನೆ. ಒಂದು ವೇಳೆ ಆರೋಪ ಸತ್ಯವಾಗಿದ್ದಲ್ಲಿ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ. 
 
ದೆಹಲಿ ಸಿಎಂ ಕೇಜ್ರಿವಾಲ್‌ ಅವರಿಗೆ ಅವರದೇ ನಿವಾಸದಲ್ಲಿ ಜೈನ್, 2 ಕೋಟಿ ರೂಪಾಯಿ ನಗದು ನೀಡಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇಂತಹವೆಲ್ಲಾ ರಾಜಕೀಯದಲ್ಲಿ ನಡೆಯುತ್ತೇವೆ ಎಂದು ಕೇಜ್ರಿವಾಲ್ ನನಗೆ ಹೇಳಿದ್ದಾಗಿ ಮಿಶ್ರಾ ಆರೋಪಿಸಿದ್ದರು.
 
ವಾಟರ್ ಟ್ಯಾಂಕರ್ ಹಗರಣ ಬಯಲುಗೊಳಿಸುತ್ತೇನೆ ಎನ್ನುವ ಆತಂಕದಿಂದ ನನ್ನನ್ನು ವಜಾ ಮಾಡಿರಬಹುದು ಎಂದು ಕಪಿಲ್ ಮಿಶ್ರಾ ದೆಹಲಿ ಸಿಎಂ ವಿರುದ್ಧ ಆರೋಪ ಮಾಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

Viral Video: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ: ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ರೋಡ್ ಶೋ

Viral video: ತಿರುಪತಿ ದೇವಾಲಯದಲ್ಲೇ ನಮಾಜ್ ಮಾಡಿದ ಮುಸ್ಲಿಂ ವ್ಯಕ್ತಿ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

ಮುಂದಿನ ಸುದ್ದಿ
Show comments