Webdunia - Bharat's app for daily news and videos

Install App

ನಿಮ್ಮವರು ಯಾರಾದದರೂ ಕುಂಭಮೇಳದಲ್ಲಿ ಸಿಲುಕಿದ್ದಾರಾ, ಕರ್ನಾಟಕ ಸರ್ಕಾರದ ಸಹಾಯವಾಣಿ ಗಮನಿಸಿ

Krishnaveni K
ಗುರುವಾರ, 30 ಜನವರಿ 2025 (09:46 IST)
ಪ್ರಯಗ್ ರಾಜ್: ಮಹಾಕುಂಭಮೇಳದಲ್ಲಿ ನಿನ್ನೆ ನಡೆದ ಕಾಲ್ತುಳಿತದಿಂದಾಗಿ ಕರ್ನಾಟಕದ ನಾಲ್ವರು ಸಾವನ್ನಪ್ಪಿದ್ದರು. ಕುಂಭಮೇಳದಲ್ಲಿ ನಿಮ್ಮವರು ಯಾರಾದರೂ ಸಿಲುಕಿದ್ದರೆ ಅವರಿಗಾಗಿ ಕರ್ನಾಟಕ ಸರ್ಕಾರ ಸಹಾಯವಾಣಿಯೊಂದನ್ನು ತೆರೆದಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಮೌನಿ ಅವಮಾಸ್ಯೆಯ ಸಂದರ್ಭದಲ್ಲಿ ಸಾಕಷ್ಟು ಮಂದಿ ಸೇರಿದ್ದರು. ಈ ಸಂದರ್ಭದಲ್ಲಿ ನೂಕುನುಗ್ಗಲಿನಿಂದಾಗಿ ಕಾಲ್ತುಳಿತವಾಗಿದ್ದು 30 ಭಕ್ತರು ಸಾವನ್ನಪ್ಪಿದ್ದರು. ಹಲವರು ಕುಟುಂಬದವರಿಂದ ಬೇರ್ಪಟ್ಟಿದ್ದಾರೆ.

ಹೀಗಾಗಿ ಈಗ ಕರ್ನಾಟಕ ಸರ್ಕಾರ ನಮ್ಮ ರಾಜ್ಯದ ಪ್ರವಾಸಿಗರ ಸಹಾಯಕ್ಕೆ ಧಾವಿಸಿದೆ. ಕರ್ನಾಟಕದಿಂದ ತೆರಳಿದ ಭಕ್ತರು ಯಾರಾದರೂ ಕುಟುಂಬದವರ ಸಂಪರ್ಕಕ್ಕೆ ಸಿಗದೇ ಹೋಗಿದ್ದರೆ, ಕುಟುಂಬದವರಿಂದ ಬೇರ್ಪಟ್ಟಿದ್ದರೆ ಈ ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದಾಗಿದೆ.

080-22340616 ಎಂಬ ಸಹಾಯವಾಣಿಯನ್ನು ತೆರೆಯಲಾಗಿದ್ದು, ಈ ಮೂಲಕ ನಿಮ್ಮವರನ್ನು ಪತ್ತೆ ಮಾಡಲು ಸಹಾಯ ಪಡೆಯಬಹುದಾಗಿದೆ. ಕುಂಭಮೇಳದಲ್ಲಿ ದುರಂತಕ್ಕೀಡಾದವರ ಮತ್ತು ಸಂಕಷ್ಟಕ್ಕೀಡಾದವರಿಗೆ ಸರ್ಕಾರ ನೆರವು ನೀಡಲಿದೆ ಎಂದು ನಿನ್ನೆಯೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments