ಕೇರಳದ ಈ ಜಿಲ್ಲೆಗೆ ಸದ್ಯಕ್ಕೆ ತೆರಳುವುದು ಡೇಂಜರ್..ಡೇಂಜರ್

Krishnaveni K
ಶುಕ್ರವಾರ, 26 ಜುಲೈ 2024 (12:00 IST)
ಬೆಂಗಳೂರು: ಕೇರಳದಾದ್ಯಂತ ನಿಫಾ ವೈರಸ್ ಭೀತಿಯಿದ್ದು, ಈ ಒಂದು ಜಿಲ್ಲೆಗೆ ತೆರಳುವುದು ಅಪಾಯವನ್ನು ಆಹ್ವಾನಿಸಿಕೊಂಡಂತೆ. ಹೀಗಾಗಿ ಈ ಜಿಲ್ಲೆಗೆ ಹೋಗಬೇಡಿ ಎಂದು ಕರ್ನಾಟಕದ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ಆತಂಕ ಹೆಚ್ಚಾಗಿದೆ. ಜುಲೈ 21 ರಂದು ನಿಫಾ ವೈರಸ್ ಗೊಳಗಾಗಿದ್ದ ಬಾಲಕನೊಬ್ಬ ಕೋಝಿಕ್ಕೋಡ್ ಮೆಡಿಕಲ್ ಕಾಲೇಜಿಗೆ ದಾಖಲಾಗುವ ಮುನ್ನವೇ ಸಾವನ್ನಪ್ಪಿದ್ದಾನೆ. ಈ ಹಿನ್ನಲೆಯಲ್ಲಿ ಮಲಪ್ಪುರಂ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಇದುವರೆಗೆ ಕರ್ನಾಟಕದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಹಾಗಿದ್ದರೂ ಕೇರಳದ ಗಡಿ ಭಾಗ ಹಂಚಿಕೊಂಡಿರುವ ರಾಜ್ಯ ಕರ್ನಾಟಕವಾಗಿದೆ. ಇಲ್ಲಿಂದ ಕೇರಳಕ್ಕೆ ಮತ್ತು ಕೇರಳದಿಂದ ಇಲ್ಲಿಗೆ ಸಾಕಷ್ಟು ಜನ ಬಂದು ಹೋಗುತ್ತಿರುತ್ತಾರೆ. ಹೀಗಾಗಿ ರೋಗ ಹರಡುವ ಭೀತಿ ಹೆಚ್ಚು.

ನಿಫಾ ವೈರಸ್ ಬಾವಲಿಯಿಂದ ಹರಡುವ ರೋಗವಾದರೂ ಇದು ಮನುಷ್ಯನಿಗೆ ತಗುಲಿದರೆ ಒಬ್ಬರಿಂದ ಒಬ್ಬರಿಗೆ ಸಾಂಕ್ರಾಮಿಕವಾಗಿ ಹರಡಲಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದ ಮಲಪ್ಪುರಂ ಜಿಲ್ಲೆಗೆ ಸದ್ಯಕ್ಕೆ ತೆರಳದಂತೆ ಕರ್ನಾಟಕ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೆ, ಮಲಪ್ಪುರಂ ಜಿಲ್ಲೆ ನಿಫಾ ವೈರಸ್ ಮುಕ್ತ ಎಂದು ಖಚಿತವಾಗುವವರೆಗೂ ಹೋಗಬೇಡಿ ಎಂದು ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments