Webdunia - Bharat's app for daily news and videos

Install App

ಕರ್ನಾಟಕವೇ ನಮ್ಮ ಮುಂದಿನ ಟಾರ್ಗೆಟ್: ಅಮಿತ್ ಶಾ ಘೋಷಣೆ

Webdunia
ಶನಿವಾರ, 15 ಏಪ್ರಿಲ್ 2017 (20:43 IST)
ಕರ್ನಾಟಕವೇ ನಮ್ಮ ಮುಂದಿನ ಟಾರ್ಗೆಟ್. ನಮ್ಮ ಎಲ್ಲ ರಾಜಕೀಯ ಲೆಕ್ಕಾಚಾರಗಳು ಸರಿಯಾಗಿಯೇ ಇವೆ. ಕರ್ನಾಟಕದಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೊಷಿಸಿದ್ದಾರೆ.
ಒಡಿಶಾದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅಮಿತ್ ಶಾ ನಮ್ಮ ಮುಂದಿನ ಟಾರ್ಗೆಟ್ ಗುಜರಾತ್, ಹಿಮಾಚಲಪ್ರದೇಶ ಮತ್ತು ಕರ್ನಾಟಕ ಎಂದು ಹೇಳಿದ್ದಾರೆ.


ಮುಂದಿನ ವರ್ಷ ಈ ಮೂರೂ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶವನ್ನ ಕ್ಲೀನ್ ಸ್ವೀಪ್ ಮಾಡಿದ ಬಳಿಕ ಅಮಿತ್ ಶಾ ಈ ಮೂರೂ ರಾಜ್ಯಗಳತ್ತ ಚಿತ್ತ ನೆಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಬ್ಬಾಗಿಲು ಎನ್ನಲಾಗುವ ಕರ್ನಾಟಕವನ್ನೂ ಅಮಿತ್ ಶಾ ಗಂಭೀರವಾಗಿ ಪರಿಗಣಿಸಿದ್ದಾರೆ. ಕರ್ನಾಟಕದಲ್ಲಿ ಕೇಸರಿ ಬಾವುಟ ಬಾರಿಸಿದರೆ ಇತರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ನೆಲೆಯೂರಲು ಅನುಕೂಲವಾಗಲಿದೆ.

ಆದರೆ, ಉತ್ತರ ಭಾರತದಲ್ಲಿ ಹರಡಿರುವ ಮೋದಿ ಅಲೆ ದಕ್ಷಿಣದಲ್ಲಿ ಅಷ್ಟಾಗಿ ವರ್ಕೌಟ್ ಆಗಿಲ್ಲವಾದ್ದರಿಂದ ಬಿಜೆಪಿಗೆ ಇದೊಂದು ಸವಾಲಿನ ಕೆಲಸವಾಗಲಿದೆ. ಮೊನ್ನೆಯಷ್ಟೇ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಬಿಜೆಪಿಯ ಹುಮ್ಮಸ್ಸಿಗೆ ಕೊಂಚ ತಣ್ಣೀರೆರಚಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments